ಪ್ರಧಾನಿ ವೈದ್ಯಕೀಯ ಪರೀಕ್ಷೆಗೆ ಒಳಪಡಬೇಕಿತ್ತು ಎಂದ ಸುಬ್ರಮಣಿಯನ್ ಸ್ವಾಮಿ

Update: 2018-07-22 15:27 GMT

ಹೊಸದಿಲ್ಲಿ, ಜು.22: ವಿಶ್ವಾಸಮತ ಯಾಚನೆಯ ಚರ್ಚೆಯ ಸಂದರ್ಭ ಸಂಸತ್ತಿನಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅಪ್ಪಿಕೊಂಡ ಬಳಿಕ ಪ್ರಧಾನಿ ಮೋದಿ ವೈದ್ಯಕೀಯ ಪರೀಕ್ಷೆಗೆ ಒಳಪಡಬೇಕಿತ್ತು ಎಂದು ಹಿರಿಯ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ.

ಈ ರೀತಿ ಏಕಾಏಕಿ ಪ್ರಧಾನಿಯನ್ನು ಅಪ್ಪಿಕೊಳ್ಳುವುದು ಸರಿಯಲ್ಲ. ಸಂಸತ್ತಿನ ಒಳಗೆ ಪ್ರಧಾನಿಯ ರಕ್ಷಣೆಯ ಕುರಿತು ಇದು ಯಾವ ಸಂದೇಶವನ್ನು ನೀಡುತ್ತದೆ. ಇದು ಅನೈತಿಕವಾಗಿದ್ದು ಇಂತಹ ವರ್ತನೆಗಳನ್ನು ಪ್ರೋತ್ಸಾಹಿಸಬಾರದು. ಅಲ್ಲದೆ ಭವಿಷ್ಯದಲ್ಲಿ ಈ ರೀತಿಯ ಘಟನೆಗಳು ಪುನರಾವರ್ತನೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಸ್ವಾಮಿ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News