ಅಪರಿಚಿತ ವಾಹನ ಢಿಕ್ಕಿ: ಪಾದಚಾರಿ ಮೃತ್ಯು

Update: 2018-07-22 15:29 GMT

ಬೆಂಗಳೂರು, ಜು.22: ಅಪರಿಚಿತ ವಾಹನಯೊಂದು ರಸ್ತೆದಾಟುತ್ತಿದ್ದ ಪಾದಚಾರಿಗೆ ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಗಾರ್ಮೆಂಟ್ ಉದ್ಯೋಗಿ, ಬಸಾಪುರ ನಿವಾಸಿ ಚಂದ್ರಪ್ಪ (45) ಅಪಘಾತದಲ್ಲಿ ಮೃತಪಟ್ಟವರು ಎಂದು ಪೊಲೀಸರು ಗುರುತಿಸಿದ್ದಾರೆ.

ಶನಿವಾರ ತಡರಾತ್ರಿ ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದಾಗ ಹೊಸೂರು ರಸ್ತೆಯ ಶಾಲೆಯ ಸಮೀಪ ಚಂದ್ರಪ್ಪ ರಸ್ತೆ ದಾಟುತ್ತಿದ್ದಾಗ ಯಾವುದೋ ವಾಹನ ಢಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ಅವರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತ ನಡೆಸಿದ ಚಾಲಕ ವಾಹನವನ್ನು ನಿಲ್ಲಿಸದೆ ಚಾಲನೆ ಮಾಡಿಕೊಂಡು ಹೋಗಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News