ಶಿವಮೊಗ್ಗ: ರಸ್ತೆ ಅಪಘಾತದ ಗಾಯಾಳು ಮೃತ್ಯು

Update: 2018-07-22 17:21 GMT

ಶಿವಮೊಗ್ಗ, ಜು.22: ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಜಿಲ್ಲೆಯ ಭದ್ರಾವತಿ ಮೂಲದ ವ್ಯಕ್ತಿಯೋರ್ವರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ಘಟನೆ ವರದಿಯಾಗಿದೆ.

ಲೋಕೇಶ್ (42) ಮೃತಪಟ್ಟ ಪಾದಚಾರಿ ಎಂದು ಗುರುತಿಸಲಾಗಿದೆ. ಇವರು ಬಿ.ಎಚ್.ರಸ್ತೆಯ ಹುತ್ತಾ ಏರಿಯಾದ ಪೆಟ್ರೋಲ್ ಬಂಕ್‌ವೊಂದರ ಬಳಿ ನಡೆದುಕೊಂಡು ಬರುತ್ತಿದ್ದಾಗ ಟಾಟಾ ಏಸ್ ಸರಕು ಸಾಗಣೆ ವಾಹನ ಢಿಕ್ಕಿ ಹೊಡೆದಿತ್ತು. ತದನಂತರ ವಾಹನ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದ.

ಗಂಭೀರವಾಗಿ ಗಾಯಗೊಂಡ ಲೋಕೇಶ್‌ರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಿ, ಬಳಿಕ ಮಂಗಳೂರಿನ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅಸುನೀಗಿದ್ದಾರೆ. ಈ ಸಂಬಂಧ ಭದ್ರಾವತಿ ಸಂಚಾರಿ ಪೊಲಿೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News