​ಚಿಕ್ಕಮಗಳೂರು: ಹೈಟೆನ್ಶನ್ ತಂತಿ ತಗುಲಿ ಸಹೋದರರಿಬ್ಬರು ಗಂಭೀರ

Update: 2018-07-22 18:52 GMT

ಚಿಕ್ಕಮಗಳೂರು, ಜು.22: ಮನೆಯ ಮೇಲ್ಛಾವಣಿಯಲ್ಲಿ ಆಟವಾಡುತ್ತಿದ್ದ ಸಹೋದರರಿಬ್ಬರಿಗೆ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಗಂಭೀರ ಗಾಯಗೊಂಡಿರುವ ಘಟನೆ ನಗರದ ರಾಮನಹಳ್ಳಿಯಲ್ಲಿ ರವಿವಾರ ಸಂಜೆ ನಡೆದಿದೆ.

ಗಾಯಗೊಂಡವರನ್ನು ಮೆಹಫೂಝುದ್ದೀನ್(13), ಸಿಯಾನ್(8) ಎಂದು ಗುರುತಿಸಲಾಗಿದೆ.

ಘಟನೆಯಿಂದ ಮಕ್ಕಳ ದೇಹದಲ್ಲಿ ಗಂಭೀರ ಸ್ವರೂಪದ ಸುಟ್ಟಗಾಯಗಳಾಗಿದ್ದು, ತಕ್ಷಣ ಅವರನ್ನು ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಘಟನೆಯ ವಿವರ: ನಗರದ ರಾಮನಹಳ್ಳಿಯಲ್ಲಿರುವ ತಮ್ಮ ಮನೆಯ ಮೇಲ್ಛಾವಣಿಯಲ್ಲಿ ಸಹೋದರರಾದ ಮೆಹಫೂಝುದ್ದೀನ್ ಮತ್ತು ಸಿಯಾನ್ ಆಟವಾ ಡುತ್ತಿದ್ದರು. ಈ ವೇಳೆ ಮನೆಯ ಸಮೀಪದಲ್ಲಿ ಹಾದು ಹೋಗಿದ್ದ ಹೈಟೆನ್ಶನ್ ವಯರ್ ಗಾಳಿಯ ಸಭಸಕ್ಕೆ ಮಕ್ಕಳಿಗೆ ತಾಗಿದೆ. ಪರಿಣಾಮ ಸಹೋದರರಿಬ್ಬರಿಗೂ ಗಂಭೀರ ಸ್ವರೂಪದ ಸುಟ್ಟಗಾಯಗಳಾಗಿದೆ. ತಕ್ಷನ ಅವರನ್ನು ಮ್ಲೇಗೌಡ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗಕ್ಕೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಸಂಬಂಧ ಬಸವನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News