ಹಿಮಾಚಲ ಪ್ರದೇಶದ ಕಟ್ಟಡದಲ್ಲಿ ಬೆಂಕಿ ಅನಾಹುತ ; 5 ಸಾವು

Update: 2018-07-23 04:29 GMT

ಹೊಸದಿಲ್ಲಿ, ಜು.23: ಹಿಮಾಚಲ ಪ್ರದೇಶದ ಮಾಂಡಿ ಜಿಲ್ಲೆಯ ವಸತಿ ಕಟ್ಟಡವೊಂದರಲ್ಲಿ  ಬೆಂಕಿ ಅನಾಹುತ ಸಂಭವಿಸಿದ ಪರಿಣಾಮವಾಗಿ  ಐವರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ. ಅಡುಗೆ ಅನಿಲ ಸಿಲಿಂಡರ್ ಸ್ಪೋಟಗೊಂಡಿರುವುದೇ ಕಟ್ಟಡದಲ್ಲಿ ಬೆಂಕಿ ಅವಘಡಕ್ಕೆ ಕಾರಣವಾಗಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ ಅನಾಹುತ ಸಂಭವಿಸಿರುವ ಕಟ್ಟಡದಲ್ಲಿ ಹಲವು ಮಂದಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿ ಶಾಮಕ ದಳ ಸ್ಥಳಕ್ಕಾಗಮಿಸಿದ್ದು, ಕಾರ್ಯಾಚರಣೆ ಮುಂದುವರಿದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News