ರಾ.ನಂ.ಚಂದ್ರಶೇಖರ್‌ಗೆ ‘ಕರ್ನಾಟಕ ಚೂಡಾಮಣಿ’ ಪ್ರಶಸ್ತಿ

Update: 2018-07-23 14:35 GMT

ಬೆಂಗಳೂರು, ಜು.23: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕನ್ನಡ ಕ್ರಿಯಾ ಸಮಿತಿ ಕನ್ನಡಪರ ಹೋರಾಟಗಾರರಿಗೆ ಕೊಡಮಾಡುವ ‘ಕರ್ನಾಟಕ ಚೂಡಾಮಣಿ’ ಪ್ರಶಸ್ತಿಗೆ ರಾ.ನಂ.ಚಂದ್ರಶೇಖರ ಆಯ್ಕೆಯಾಗಿದ್ದಾರೆ.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕನ್ನಡ ಕ್ರಿಯಾ ಸಮಿತಿ ಪ್ರತಿವರ್ಷವು ಕರ್ನಾಟಕ ಚೂಡಾಮಣಿ ಪ್ರಶಸ್ತಿಯನ್ನು ಕನ್ನಡಪರ ಹೋರಾಟಗಾರರೊಬ್ಬರಿಗೆ ಕೊಡುತ್ತಾ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಸುಮಾರು 4 ದಶಕಗಳಿಗೂ ಹೆಚ್ಚು ಕಾಲ ನಾಡು, ನುಡಿಯ ಸೇವೆಗಾಗಿ ಕೆಲಸ ಮಾಡುತ್ತಿರುವ ರಾ.ನಂ.ಚಂದ್ರಶೇಖರ್‌ಗೆ ನೀಡಲಾಗುತ್ತಿದೆ.

ಜು.28ರಂದು ವಿಜಯಪುರದಲ್ಲಿ ನಡೆಯುವ ಸಮಾರಂಭದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಿಜಯಪುರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ವಿದ್ಯಾವತಿ ಭಾಗವಹಿಸಲಿದ್ದಾರೆ ಎಂದು ಕ್ರಿಯಾ ಸಮಿತಿಯ ಅಧ್ಯಕ್ಷ ವ.ಚ.ಚೆನ್ನೇಗೌಡ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News