×
Ad

ಮಾತೃ ವಂದನಾ ಯೋಜನೆಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ

Update: 2018-07-23 22:39 IST

ಉಡುಪಿ, ಜು.23: ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯಡಿ ಉಡುಪಿ ಜಿಲ್ಲೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಯೋಜನಾ ಸಹಾಯಕರು ಮತ್ತು ಕಾರ್ಯಕ್ರಮ ಸಹಾಯಕರ ಹುದ್ದೆಗಳನ್ನು 11 ತಿಂಗಳ ಅವಧಿಗೆ ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಜಿಲ್ಲಾ ಮಟ್ಟದ ಯೋಜನಾ ಸಹಾಯಕರು, ಜಿಲ್ಲಾ ಮಟ್ಟದ ಕಾರ್ಯಕ್ರಮ ಸಹಾಯಕರು ಹುದ್ದೆಗೆ ನೇಮಕಾತಿ ನಡೆಯಲಿದೆ. ಆಸಕ್ತರು ತಮ್ಮ ಸ್ವ ವಿವರ ಗಳನ್ನು ಒಳಗೊಂಡ ರೆಸ್ಯೂಮ್‌ನ್ನು ಅಗತ್ಯ ದಾಖಲೆಗಳೊಂದಿಗೆ ಜು.31ರೊಳಗೆ ಕಳುಹಿಸುವಂತೆ ತಿಳಿಸಲಾಗಿದೆ.

ಜಿಲ್ಲಾ ಮಟ್ಟದ ಯೋಜನಾ ಸಹಾಯಕರು, ಜಿಲ್ಲಾ ಮಟ್ಟದ ಕಾರ್ಯಕ್ರಮ ಸಹಾಯಕರು ಹುದ್ದೆಗೆ ನೇಮಕಾತಿ ನಡೆಯಲಿದೆ. ಆಸಕ್ತರು ತಮ್ಮ ಸ್ವ ವಿವರ ಗಳನ್ನು ಒಳಗೊಂಡ ರೆಸ್ಯೂಮ್‌ನ್ನು ಅಗತ್ಯ ದಾಖಲೆಗಳೊಂದಿಗೆ ಜು.31ರೊಳಗೆ ಕಳುಹಿಸುವಂತೆ ತಿಳಿಸಲಾಗಿದೆ. ಮೇಲಿನ ಹುದ್ದೆಗಳಿಗೆ ಆ.4ರಂದು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ಮತ್ತು ಆ.9ರಂದು ಕನ್ನಡ ಮತ್ತು ಆಂಗ್ಲ ಬಾಷಾ ಪ್ರಾವೀಣ್ಯತೆ ಕುರಿತು ಸಂದರ್ಶನ ನಡೆಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಳಿಗೆ ಉಪ ನಿರ್ದೇಶಕರು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ರಜತಾದ್ರಿ, ಮಣಿಪಾಲ ಇವರನ್ನು ಸಂಪರ್ಕಿಸುವಂತೆ ಸೂಚಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News