ಬೆಂಗಳೂರು: ಮನೆಯ ಬೀಗ ಒಡೆದು ಕಳವು

Update: 2018-07-24 14:35 GMT

ಬೆಂಗಳೂರು, ಜು.24: ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರ ಮನೆಯ ಬೀಗ ಒಡೆದು ಒಳನುಗ್ಗಿದ ದುಷ್ಕರ್ಮಿಗಳು ವಸ್ತುಗಳನ್ನು ಕಳವು ಮಾಡಿರುವ ಘಟನೆ ಇಲ್ಲಿನ ಮಾರತ್ತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮಾರತ್ತಹಳ್ಳಿಯ ಮೊದಲನೆ ಮುಖ್ಯರಸ್ತೆಯ ಆರ್‌ಎಂಕೆ ಕಟ್ಟಡದಲ್ಲಿರುವ ಹರೀಶ್ ಎಂಬುವರ ಮನೆಯಲ್ಲಿ ಕಳವು ಪ್ರಕರಣ ಬೆಳಕಿಗೆ ಬಂದಿದೆ.

ಸೋಮವಾರ ಬೆಳಗ್ಗೆ 8 ಗಂಟೆಗೆ ಮನೆಗೆ ಬೀಗ ಹಾಕಿಕೊಂಡು ಹೊರಗೆ ಹೋಗಿದ್ದಾಗ ದುಷ್ಕರ್ಮಿಗಳು ಮನೆಯ ಬೀಗ ಒಡೆದು 30 ಸಾವಿರ ಬೆಲೆಯ ಎಲೆಕ್ಟ್ರಾನಿಕ್ ವಸ್ತುಗಳನ್ನು ಕಳ್ಳತನ ಮಾಡಿದ್ದಾರೆ. ರಾತ್ರಿ 8 ಗಂಟೆಗೆ ಹರೀಶ್ ಮನೆಗೆ ವಾಪಸಾದಾಗ ಕಳ್ಳತನ ನಡೆದಿರುವುದನ್ನು ಕಂಡು ಪೊಲೀಸರಿಗೆ ದೂರು ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News