×
Ad

ದಾವಣಗೆರೆ: ಅಪಘಾತದ ಗಾಯಾಳುಗಳನ್ನು ತನ್ನ ಕಾರಿನಲ್ಲಿ ಆಸ್ಪತ್ರೆಗೆ ದಾಖಲಿಸಿದ ಶಾಸಕ ರಾಮಪ್ಪ

Update: 2018-07-24 21:21 IST

ದಾವಣಗೆರೆ,ಜು.24: ಅಪಘಾತದಲ್ಲಿ ಗಾಯಗೊಂಡಿದ್ದ ಗಾಯಾಳುಗಳನ್ನು ಅದೇ ದಾರಿಯಲ್ಲಿ ಸಾಗುತ್ತಿದ್ದ ಹರಿಹರ ಶಾಸಕ ಎಸ್. ರಾಮಪ್ಪ ತಕ್ಷಣವೇ ತಮ್ಮ ಕಾರಿನಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಮಂಗಳವಾರ ಹರಿಹರ ನಗರದ ಮುಖ್ಯರಸ್ತೆಯಲ್ಲಿ ಎರಡು ಬೈಕ್‍ಗಳ ನಡುವೆ ಢಿಕ್ಕಿಯಾಗಿ ನಾಲ್ವರು ಗಾಯಗೊಂಡಿದ್ದರು. ಈ ಸಂದರ್ಭ ಇದೇ ದಾರಿಯಲ್ಲಿ ಹೋಗುತ್ತಿದ್ದ ಶಾಸಕ ರಾಮಪ್ಪ ತಕ್ಷಣ ಕಾರ್ ನಿಲ್ಲಿಸಿ ತಮ್ಮ ಕಾರಿನಲ್ಲಿಯೇ ಗಾಯಾಳುಗಳನ್ನು ಹರಿಹರ ತಾಲೂಕು ಆಸ್ಪತ್ರೆಗೆ ಸಾಗಿಸಿದ್ದಲ್ಲದೇ, ಗಾಯಾಳುಗಳ ಸಂಬಂಧಿಗಳು ಬರುವ ತನಕ ಆಸ್ಪತ್ರೆಯಲ್ಲಿಯೇ ನಿಂತಿದ್ದರು. ನಂತರ ವೈದ್ಯರಿಗೆ ಸೂಕ್ತ ಚಿಕಿತ್ಸೆ ಕೊಡುವಂತೆ ಸೂಚಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News