ಜು.27 ರಂದು ಶರಣ ಹಡಪದ ಅಪ್ಪಣ್ಣ ಜಯಂತಿ
Update: 2018-07-25 13:32 GMT
ಬೆಂಗಳೂರು, ಜು. 25: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜು.27ಕ್ಕೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜು.27ರ ಬೆಳಗ್ಗೆ 11.30 ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗಲಿದ್ದು, ಅನ್ನದಾನಿ ಭಾರತಿ ಅಪ್ಪಣ್ಣ ಸ್ವಾಮಿ, ಅಪ್ಪಣ್ಣ ದೇವರ ಮಠ, ತಂಗಡಗಿ ಹಾಗೂ ಶ್ರೀಧರಾನಂದ ಸರಸ್ವತಿ ಸ್ವಾಮಿ, ಸವಿತಾ ಪೀಠ ಕುಂಚೂರು, ವಾಡಿ ಇವರುಗಳ ಸಾನಿಧ್ಯದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದ ಉದ್ಫಾಟನೆಯನ್ನು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ನೆರವೇರಿಸಲಿದ್ದಾರೆ.
ಕೇಂದ್ರ ಸಚಿವ ಅನಂತ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಸಚಿವೆ ಡಾ. ಜಯಮಾಲ, ಮೇಯರ್ ಆರ್.ಸಂಪತರಾಜ್ ಮುಖ್ಯ ಅತಿಥಿಗಳಾಗಿರುವ ಸಮಾರಂಭದಲ್ಲಿ ಮಾಜಿ ಸಚಿವರು ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳಲಿದ್ದು, ಅಧ್ಯಕ್ಷತೆಯನ್ನು ಚಿಕ್ಕಪೇಟೆ ಕ್ಷೇತ್ರದ ಶಾಸಕ ಡಾ.ಉದಯ್ ಗರುಡಾಚಾರ್ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.