ವಿವಿ ಸಿಂಡಿಕೇಟ್‌ಗೆ ಹೊಸ ಸದಸ್ಯರ ನೇಮಕ: ಸಚಿವ ಜಿ.ಟಿ.ದೇವೇಗೌಡ

Update: 2018-07-25 13:36 GMT

ಬೆಂಗಳೂರು, ಜು.25: ವಿಶ್ವವಿದ್ಯಾಲಯಗಳ ಸಿಂಡಿಕೇಟ್‌ಗೆ ಈ ಬಾರಿ ಕಾಂಗ್ರೆಸ್-ಜೆಡಿಎಸ್ ಒಳಗೊಂಡ ಸದಸ್ಯರನ್ನು ನೇಮಕ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ತಿಳಿಸಿದರು.

ಬುಧವಾರ ಮಹಾರಾಣಿ ಮಹಿಳಾ ಕಲಾ, ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜಿನ ಪ್ರಸಕ್ತ ಸಾಲಿನ ಸಾಂಸ್ಕೃತಿಕ ಕ್ರೀಡಾ ಚಟುವಟಿಕೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಹೊಸ ಸರಕಾರ ರಚನೆಯಾದಾಗ ಸಿಂಡಿಕೇಟ್ ಸದಸ್ಯರನ್ನು ಬದಲಾವಣೆ ಮಾಡುವುದು ನಿಯಮ. ಅದರಂತೆ ರಾಜ್ಯಾದ್ಯಂತ ವಿವಿಗಳಲ್ಲಿ ಹಳೆ ಸಿಂಡಿಕೇಟ್ ಸದಸ್ಯರನ್ನು ಕೈಬಿಡಲಾಗಿದೆ ಎಂದರು.

ಎಲ್ಲ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ನೀಡುವ ಕುರಿತು ಗೊಂದಲದ ಬಗ್ಗೆ ಇನ್ನೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ಈ ಬಗ್ಗೆ ಯಾರಿಗೂ ಗೊಂದಲ ಬೇಡವೆಂದು ತಿಳಿಸಿದರು. ಈ ವೇಳೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಬಾಯಿ, ಪ್ರಾಂಶುಪಾಲ ಪ್ರೊ.ಬಿ.ರೇಣುಕಾ, ಪ್ರೊ.ಎಂ.ಕೆ.ನಾಯಕ್ ಮತ್ತಿತರರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News