​ಕರಡಿ ದಾಳಿ: ಯುವಕನಿಗೆ ಗಂಭೀರ ಗಾಯ

Update: 2018-07-28 10:36 GMT

ತುಮಕೂರು, ಜು.28: ಜಮೀನಿನಲ್ಲಿ ಬೆಳೆಗಳಿಗೆ ನೀರು ಹರಿಸುತ್ತಿದ್ದ ವೇಳೆ ಕರಡಿ ದಾಳಿ ನಡೆಸಿದ್ದರಿಂದ ಯುವಕನೋರ್ವ ಗಂಭೀರ ಗಾಯಗೊಂಡ ಘಟನೆ ಕೊರಟಗೆರೆ ತಾಲೂಕಿನ ಚನ್ನರಾಯನದರ್ಗ ಹೋಬಳಿ ದೊಡ್ಡ ನರಸಯನಪಾಳ್ಳ ಗ್ರಾಮದಲ್ಲಿ ನಡೆದಿದೆ.

ನರಸಯನಪಾಳ್ಳ ಗ್ರಾಮ ನಿವಾಸಿ ದಿನೇಶ್(23) ಗಾಯಾಳು ಯುವಕ. ಇವರು ಜಮೀನಿನಲ್ಲಿ ನೀರು ಹರಿಸುತ್ತಿದ್ದ ವೇಳೆ ಕರಡಿ ದಾಳಿ ನಡೆಸಿದೆ. ಇದರಿಂದ ಅವರ ತಲೆ ಸಹಿತ ದೇಹದೆಲ್ಲೆಡೆ ಗಾಯಗಳಾಗಿವೆ. ಗಂಭೀರ ಗಾಯಗೊಂಡಿದ್ದ ದಿನೇಶ್‌ರನ್ನು ಗ್ರಾಮಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕೊರಟಗೆರೆ ತಾಲೂಕಿನಲ್ಲಿ ಕಾಡು ಪ್ರಾಣಿಗಳ ಹಾವಳಿ ವಿಪರೀತವಾಗಿದೆ. ಈ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News