ಸ್ಪಷ್ಟೀಕರಣ

Update: 2018-07-28 14:58 GMT

ಬೆಂಗಳೂರು, ಜು.28: ತೈವಾನ್ ಮೂಲದ ವಿಸ್ಟ್ರನ್ ಟೆಕ್ನಾಲಜೀಸ್ ಕಂಪೆನಿಯು ರಾಜ್ಯದಲ್ಲಿ 3 ಸಾವಿರ ಕೋಟಿ ರೂ.ಬಂಡವಾಳ ಹೂಡಿ, ಆಪಲ್-ಐಫೋನ್ ಮೊಬೈಲ್ ದುರಸ್ಥಿ ಕೇಂದ್ರವನ್ನು ಸ್ಥಾಪಿಸಲಿದೆ ಎಂದು ಜು.24ರಂದು ಮುಖ್ಯಮಂತ್ರಿ ಕಚೇರಿಯಿಂದ ಬಿಡುಗಡೆ ಮಾಡಲಾಗಿದ್ದ ಪ್ರಕಟನೆಯಲ್ಲಿ ತಿಳಿಸಲಾಗಿತ್ತು.

ಆದರೆ, ವಿಸ್ಟ್ರನ್ ಟೆಕ್ನಾಲಜೀಸ್ ಸಂಸ್ಥೆಯು ದೇಶದಲ್ಲಿ ತಮ್ಮ ಕಾರ್ಯವನ್ನು ವಿಸ್ತರಿಸಲು ಹೂಡಿಕೆ ಮಾಡಲು ಉದ್ದೇಶಿಸಿದೆ. ಆದರೆ, ಸದ್ಯಕ್ಕೆ ಅವರು ಯಾವುದನ್ನು ಅಂತಿಮಗೊಳಿಸಿಲ್ಲ. ಮುಖ್ಯಮಂತ್ರಿಯ ನಾಯಕತ್ವದಲ್ಲಿ ನಮ್ಮ ರಾಜ್ಯದಲ್ಲಿಯೂ ತಮ್ಮ ಕಾರ್ಯವನ್ನು ವಿಸ್ತರಿಸಲು ಆಸಕ್ತರಾಗಿದ್ದಾರೆ ಎಂದು ಸಂಸ್ಥೆಯ ಭಾರತದ ಮುಖ್ಯಸ್ಥ ಎ.ಗುರುರಾಜ್ ಸ್ಪಷ್ಟಣೆ ನೀಡಿದ್ದಾರೆ ಎಂದು ಮುಖ್ಯಮಂತ್ರಿಯ ಮಾಧ್ಯಮ ಕಾರ್ಯದರ್ಶಿ ಎಚ್.ಬಿ.ದಿನೇಶ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News