ಬಿಜೆಪಿ ಮುಖಂಡನ ಕೊಚ್ಚಿ ಕೊಲೆ

Update: 2018-07-28 16:07 GMT

ಕೋಲ್ಕತ, ಜು.28: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಮಂದಿರ ಬಝಾರ್ ಪ್ರದೇಶದಲ್ಲಿ ಸ್ಥಳೀಯ ಬಿಜೆಪಿ ಮುಖಂಡನನ್ನು ಅಪರಿಚಿತ ದುಷ್ಕರ್ಮಿಗಳು ಹರಿತವಾದ ಆಯುಧದಿಂದ ಕೊಚ್ಚಿ ಕೊಲೆಗೈದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಮಂದಿರ ಬಝಾರ್ - ಧರ್ನುಹಾಟ್ ಪ್ರದೇಶದ ಬಿಜೆಪಿ ಮಂಡಲ ಸಮಿತಿಯ ಪ್ರಧಾನ ಕಾರ್ಯದರ್ಶಿ ಶಕ್ತಿಪಾದ ಸರ್ದಾರ್ ಎಂಬವರು ಶುಕ್ರವಾರ ರಾತ್ರಿ ಮನೆಗೆ ತೆರಳುತ್ತಿದ್ದಾಗ ದುಷ್ಕರ್ಮಿಗಳು ದಾಳಿ ನಡೆಸಿದ್ದು ಹರಿತವಾದ ಆಯುಧದಿಂದ ಇರಿದ ಪರಿಣಾಮ ಸರ್ದಾರ್ ರಸ್ತೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದರು. ಅಷ್ಟರಲ್ಲಿ ಸ್ಥಳಕ್ಕೆ ಬಂದ ಸ್ಥಳೀಯರು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅವರ ಆರೋಗ್ಯಸ್ಥಿತಿ ಬಿಗಡಾಯಿಸಿದ ಕಾರಣ ಕೋಲ್ಕತಾದ ಆಸ್ಪತ್ರೆಗೆ ಸ್ಥಳಾಂತರಿಸುವ ಸಂದರ್ಭ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸರ್ದಾರ್ ಹತ್ಯೆಯ ಹಿಂದೆ ಟಿಎಂಸಿ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದೆ. ಟಿಎಂಸಿ ಆರೋಪವನ್ನು ನಿರಾಕರಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News