ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2018-07-28 16:36 GMT

ಹಿರಿಯಡ್ಕ, ಜು.28: ವೈಯಕ್ತಿಕ ಕಾರಣದಿಂದ ಮನನೊಂದ ಬೆಳ್ಕಲ್ಗುಡ್ಡೆ ಮಾಣೈ ನಿವಾಸಿ ಸುಧಾಕರ ಶೆಟ್ಟಿ(65) ಎಂಬವರು ಜು.28ರಂದು ಬೆಳಗ್ಗೆ ಮನೆ ಸಮೀಪದ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬ್ರಹ್ಮಾವರ: ವೈಯಕ್ತಿಕ ಕಾರಣದಿಂದ ಮನನೊಂದ ಚಾಂತಾರು ಮಠದಬೆಟ್ಟು ನಿವಾಸಿ ಗಣೇಶ ನಾಯಕ್(43) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜು.27ರಂದು ರಾತ್ರಿ ವೇಳೆ ಮನೆಯ ಉಪ್ಪರಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News