ಬಂಟ್ವಾಳ: ರಸ್ತೆ ಅಪಘಾತದ ಗಾಯಾಳು ಮೃತ್ಯು

Update: 2018-07-29 13:52 GMT

ಬಂಟ್ವಾಳ, ಜು. 29: ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೇ ರವಿವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಬಂಟ್ವಾಳ ತಾಲೂಕಿನ ಬಡಗಬೆಳ್ಳೂರು ಹೊಯಿಗೆ ಅಂಗಡಿ ನಿವಾಸಿ ಅಬೂಬಕರ್ ಹಮ್ಮಬ್ಬ ಮೃತ ಬೈಕ್ ಸವಾರ  ಗುರುತಿಸಲಾಗಿದೆ‌.
ಘಟನೆ:  ಶುಕ್ರವಾರ ರಾತ್ರಿ ಕಲ್ಪನೆ ಸಮೀಪ ಕಳ್ಳಿಗೆ ಎಂಬಲ್ಲಿ ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪಾರಾರಿಯಾಗಿತ್ತೆನ್ನಲಾಗಿದೆ.
ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಅಬೂಬಕರ್ ಅವರನ್ನು ಸ್ಥಳೀಯರು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಮೃತಪಟ್ಟಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

ಅಬೂಬಕರ್ ಅವರು  ಮಂಗಳೂರಿನಲ್ಲಿ ಬಟ್ಟೆ ಅಂಗಡಿ ತೆರೆಯುವ ಸಿದ್ಧತೆಯಲ್ಲಿದ್ದು, ಶುಭಾರಂಭದ ಕೆಲಸದ ನಿಮಿತ್ತ ದ್ವಿಚಕ್ರ ವಾಹನದಲ್ಲಿ  ಕೈಕಂಬದಿಂದ  ಮನೆಗೆ ಹೋಗುತ್ತಿರುವಾಗ ಕಲ್ಪನೆ ಸಮೀಪ ಈ ಅಪಘಾತ ಸಂಭವಿಸಿದೆ‌. ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರು ಇಬ್ಬರು ಪುತ್ರಿ, ಓರ್ವ ಪುತ್ರನನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News