ವಿದ್ಯುತ್ ಆಘಾತ: ಯುವಕ ಮೃತ್ಯು
Update: 2018-07-29 17:30 GMT
ಮಲ್ಪೆ, ಜು.29: ಕನ್ನರ್ಪಾಡಿ ಬಾಲಾಜಿ ಲೇ ಔಟ್ನಲ್ಲಿರುವ ಲಕ್ಷ್ಮೀನಾರಾ ಯಣ ಶೆಟ್ಟಿಗಾರ್ ಎಂಬವರ ಹೊಸ ಮನೆಯ ಪೈಟಿಂಗ್ ಕೆಲಸ ಮಾಡುತ್ತಿದ್ದ ಯುವಕನೋರ್ವ ವಿದ್ಯುತ್ ಆಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಜು.28 ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ನಿಖಿಲ್ (22) ಎಂದು ಗುರುತಿಸಲಾಗಿದೆ.
ಇವರು ವಿದ್ಯುತ್ ವಯರ್ ಪಕ್ಕದಲ್ಲಿ ನಿಲ್ಲಿಸಿದ ಕಬ್ಬಿಣದ ಏಣಿಗೆ ಹತ್ತಿದ್ದಾಗ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ನಿಖಿಲ್ ಆಸ್ಪತ್ರೆಗೆ ಸಾಗಿಸುವ ದಾರಿ ಮದ್ಯೆ ಮೃತಪಟ್ಟರು. ಈ ಬಗ್ಗೆ ಮಲ್ಪೆಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.