ಪಕ್ಷವನ್ನು ಉಳಿಸಲು ಹೇಳಿಕೆ ನೀಡಿದ್ದೆ: ಮಾಜಿ ಶಾಸಕ ಕೆ.ಎನ್.ರಾಜಣ್ಣ

Update: 2018-07-30 12:35 GMT

ಬೆಂಗಳೂರು, ಜು. 30: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರದ ವಿರುದ್ಧ ಪಕ್ಷವನ್ನು ಉಳಿಸುವ ದೃಷ್ಟಿಯಿಂದ ತಾನು ಹೇಳಿಕೆ ನೀಡಿದ್ದೆ. ಪಕ್ಷದ ನೋಟಿಸ್‌ಗೆ ಉತ್ತರ ನೀಡಲಾಗುವುದು ಎಂದು ಮಾಜಿ ಶಾಸಕ ಕೆ.ಎನ್.ರಾಜಣ್ಣ ಇಂದಿಲ್ಲಿ ಸ್ಪಷ್ಟಣೆ ನೀಡಿದ್ದಾರೆ.

ಸೋಮವಾರ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಯಾವುದೇ ಪಕ್ಷ ವಿರೋಧಿ ಹೇಳಿಕೆ ನೀಡಿಲ್ಲ. ಪಕ್ಷದ ಕಾರ್ಯಕರ್ತರಲ್ಲಿ ವಿಶ್ವಾಸ ತುಂಬಲು ಆ ರೀತಿ ಹೇಳಿಕೆ ನೀಡಿದ್ದೆ. ವಿಶ್ವಾಸ ತುಂಬದಿದ್ದರೆ ಮುಂದಿನ ಚುನಾವಣೆಯಲ್ಲಿ ಹಾನಿಯಾಗಲಿದೆ ಎಂಬ ದೃಷ್ಟಿಯಿಂದ ಹೇಳಿದ್ದೇನೆ ಎಂದರು.

ಪಕ್ಷದ ನೋಟಿಸ್‌ಗೆ ಉತ್ತರ ಕೊಡಲು ಇನ್ನೂ ಸಮಯವಿದೆ. ನೋಟಿಸ್ ನೀಡಿದ ತಕ್ಷಣವೇ ಆಕಾಶ ಬಿದ್ದು ಹೋಗುವುದಿಲ್ಲ. ಎಲ್ಲವನ್ನು ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡುತ್ತೇನೆ. ಕೆಪಿಸಿಸಿ ನೂತನ ಅಧ್ಯಕ್ಷ ದಿನೇಶ್ ಗುಂಡೂರಾವ್ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಮುನ್ನಡೆಸುತ್ತಿದ್ದಾರೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News