ರಿಯಲ್ ಎಸ್ಟೇಟ್ ಉದ್ಯಮಿಯ 5 ಲಕ್ಷ ರೂ.ನಗದು ದರೋಡೆ

Update: 2018-07-31 13:28 GMT

ಬೆಂಗಳೂರು, ಜು.31: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಬಳಿಯಿದ್ದ 5 ಲಕ್ಷ ರೂ.ನಗದನ್ನು ದುಷ್ಕರ್ಮಿಗಳು ದೋಚಿ ಪರಾರಿಯಾಗಿರುವ ಘಟನೆ ಇಲ್ಲಿನ ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ನಗರದ ಪುಟ್ಟೇನಹಳ್ಳಿ ನಿವಾಸಿ, ರಿಯಲ್ ಎಸ್ಟೇಟ್ ಉದ್ಯಮಿ ಸುಧಾಕರ್ ಎಂಬುವವರು ಸೋಮವಾರ ಮಧ್ಯಾಹ್ನ 3:30ರ ಸಮಯದಲ್ಲಿ ತಮ್ಮ ಮನೆ ಬಳಿಯ ಆಂಧ್ರ ಬ್ಯಾಂಕ್ ಶಾಖೆಯಲ್ಲಿ 5 ಲಕ್ಷ ಹಣ ತೆಗೆದುಕೊಂಡು ಬ್ಯಾಗ್‌ನಲ್ಲಿ ಹಾಕಿ ತಮ್ಮ ಸ್ಕೂಟರ್ ಡಿಕ್ಕಿಯಲ್ಲಿಟ್ಟುಕೊಂಡು ಹೋಗಿದ್ದಾರೆ.

ಈ ಸಂದರ್ಭದಲ್ಲಿ ಇವರನ್ನು ಹಿಂಬಾಲಿಸಿಕೊಂಡು ಬಂದ ದುಷ್ಕರ್ಮಿಗಳು ಸ್ಕೂಟರ್ ಡಿಕ್ಕಿಯಲ್ಲಿದ್ದ 5 ಲಕ್ಷ ಹಣವನ್ನು ಅಪಹರಿಸಿ ಪರಾರಿಯಾಗಿದ್ದಾರೆ. ತಕ್ಷಣ ಕೋಣನಕುಂಟೆ ಠಾಣೆ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಅಲ್ಲಿನ ಸಿಸಿಟಿವಿಯನ್ನು ಪರಿಶೀಲಿಸಿದಾಗ 5 ಮಂದಿ ದುಷ್ಕರ್ಮಿಗಳು ಸ್ಕೂಟರ್ ಡಿಕ್ಕಿ ತೆಗೆದು ಹಣ ದೋಚುತ್ತಿರುವುದು ಕಂಡುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News