ನ್ಯಾ.ಲೋಯಾ ಸಾವಿನ ತನಿಖೆಯ ಅಗತ್ಯವಿಲ್ಲ: ಸುಪ್ರೀಂ ಕೋರ್ಟ್

Update: 2018-07-31 14:59 GMT

ಹೊಸದಿಲ್ಲಿ, ಜು.31: ಸಿಬಿಐ ನ್ಯಾಯಾಧೀಶ ಬಿ.ಎಚ್. ಲೋಯಾರ ಸಾವಿನ ತನಿಖೆಗೆ ಸಂಬಂಧಿಸಿ ತನ್ನ ಈ ಹಿಂದಿನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

ಲೋಯಾ ಸಾವು ಪ್ರಕರಣಕ್ಕೆ ಸಂಬಂಧಿಸಿ ಇನ್ನಷ್ಟು ತನಿಖೆ ನಡೆಸುವುದನ್ನು ನಿಲ್ಲಿಸುವಂತೆ ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಬಾಂಬೆ ಲಾಯರ್ಸ್ ಅಸೋಸಿಯೇಶನ್ ಪ್ರಶ್ನಿಸಿತ್ತು.

ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆರೋಪಿಯಾಗಿದ್ದ ಸೊಹ್ರಾಬುದ್ದೀನ್ ನಕಲಿ ಎನ್ ಕೌಂಟರ್ ಪ್ರಕರಣದ ವಿಚಾರಣೆಯನ್ನು ನಡೆಸುತ್ತಿದ್ದ ಲೋಯಾ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದರು. ಮಹಾರಾಷ್ಟ್ರದ ನಾಗ್ಪುರದಲ್ಲಿದ್ದಾಗ ಅವರು ಮೃತಪಟ್ಟಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News