ವಿಕಾಸ್

Update: 2018-08-01 16:23 GMT

ದಾವಣಗೆರೆ,ಆ.01: ಬೆನ್ನು ಹುರಿ ನೋವಿನಿಂದ ಬಳಲುತ್ತಿದ್ದ ಕುಸ್ತಿ ಪಟು ವಿಕಾಸ್ (20) ಸಾವನ್ನಪ್ಪಿದ್ದಾರೆ.

ದಾವಣಗೆರೆಯ ಕ್ರೀಡಾ ನಿಲಯದಲ್ಲಿ ಕಳೆದ ನಾಲ್ಕು ವರ್ಷದಿಂದ ಕ್ರೀಡಾ ಪಟು ವಿಕಾಸ್ ತರಬೇತಿ ಪಡೆಯುತ್ತಿದ್ದರು. ಮೈಸೂರು ಜಿಲ್ಲೆಯ ಸೀತಾಪುರ ಗ್ರಾಮದವರಾದ ವಿಕಾಸ್ ರಾಷ್ಟ್ರೀಯ ಮಟ್ಟದ ಕುಸ್ತಿಯಲ್ಲಿ ಹೆಸರು ಮಾಡಿದ್ದರು. ನಗರದ ಎಸ್ ಎಸ್ ಹೈಟೆಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಸಾವನ್ನಪ್ಪಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ