ಮಮತಾ ಬ್ಯಾನರ್ಜಿಯವರ ಎನ್‌ಆರ್‌ಸಿ ನಿಲುವಿಗೆ ಬೆಂಬಲ: ದೇವೇಗೌಡ

Update: 2018-08-01 17:37 GMT

ಹೊಸದಿಲ್ಲಿ, ಆ. 1: ಅಸ್ಸಾಂನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಪೌರತ್ವ ನೋಂದಣಿ ಪ್ರಕ್ರಿಯೆ ವಿರುದ್ಧ ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿಲುವಿಗೆ ತಾನು ಬೆಂಬಲ ವ್ಯಕ್ತಪಡಿಸುವುದಾಗಿ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದ್ದಾರೆ.

 ಇಂದಿಲ್ಲಿ ನಡೆದ ಸಭೆಯಲ್ಲಿ ಮಮತಾ ಬ್ಯಾನರ್ಜಿ ಅವರೊಂದಿಗೆ ಮಾತುಕತೆ ನಡೆಸಿದ ಅವರು, ದೇಶದಲ್ಲಿ ಅಸ್ತಿತ್ವದಲ್ಲಿರುವ ಪರಿಸ್ಥಿತಿ ಬಗ್ಗೆ ಬ್ಯಾನರ್ಜಿ ಅವರು ಚರ್ಚೆ ನಡೆಸಿದ್ದಾರೆ ಹಾಗೂ ಬಿಜೆಪಿಯೇತರ ಪಕ್ಷಗಳು ಸಂಘಟಿತವಾಗುವ ಅಗತ್ಯತೆ ಬಗ್ಗೆ ಒತ್ತಿ ಹೇಳಿದ್ದಾರೆ ಎಂದರು. ‘‘ಎನ್‌ಆರ್‌ಸಿ ವಿಷಯದ ಕುರಿತಂತೆ ನಾನು ಸಂಪೂರ್ಣವಾಗಿ ಮಮತಾ ಬ್ಯಾನರ್ಜಿ ಅವರನ್ನು ಬೆಂಬಲಿಸಲಿದ್ದೇನೆ.’’ ಎಂದು ದೇವೇಗೌಡ ಅವರು ಹೇಳಿದರು. ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಅಧಿಕಾರ ಸ್ವೀಕಾರ ಕಾರ್ಯಕ್ರಮದ ಸಂದರ್ಭ ಮಮತಾ ಬ್ಯಾನರ್ಜಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಬಳಿಕ ದೇವೇಗೌಡ ಅವರು ಇದೇ ಮೊದಲ ಬಾರಿಗೆ ಬ್ಯಾನರ್ಜಿ ಅವರನ್ನು ಭೇಟಿಯಾಗುತ್ತಿರುವುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News