ಚಿಕ್ಕಮಗಳೂರು: ಆ.6ರಂದು ಶಾಸಕರಿಗೆ ಸನ್ಮಾನ ಸಮಾರಂಭ, ಬ್ಯಾರಿ ಸಾಂಸ್ಕೃತಿಕ ಕಾರ್ಯಕ್ರಮ

Update: 2018-08-02 07:53 GMT

ಚಿಕ್ಕಮಗಳೂರು, ಆ.2: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ವತಿಯಿಂದ ಚಿಕ್ಕಮಗಳೂರು ಜಿಲ್ಲಾ ಬ್ಯಾರಿಗಳ ಒಕ್ಕೂಟದ ಸಹಕಾರದಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಧರ್ಮೇಗೌಡ, ಎಸ್.ಎಲ್.ಬೋಜೇಗೌಡ ಹಾಗೂ ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡರಿಗೆ ಸನ್ಮಾನ ಕಾರ್ಯಕ್ರಮವು ಆ.6ರಂದು ಚಿಕ್ಕಮಗಳೂರು ಬಸ್ ನಿಲ್ದಾಣ ಬಳಿಯಿರುವ ಕುವೆಂಪು ಕಲಾ ಮಂದಿರದಲ್ಲಿ ನಡೆಯಲಿದೆ.

ಅಂದು ಬೆಳಗ್ಗೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯ ಅಧ್ಯಕ್ಷ ಕರಂಬಾರ್ ಮುಹಮ್ಮದ್ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಜಿಲ್ಲಾ ಬ್ಯಾರಿಗಳ ಒಕ್ಕೂಟದ ಅಧ್ಯಕ್ಷ ಸಿ.ಕೆ.ಇಬ್ರಾಹೀಂ ಮುಖ್ಯ ಅತಿಥಿಯಾಗಿ ಭಾಗವಹಿಸುವರು.

ಸಭಾ ಕಾರ್ಯಕ್ರಮದ ಬಳಿಕ ಸತೀಶ್ ಸುರತ್ಕಲ್ ಹಾಗೂ ಅಶ್ರಫ್ ಅಪೋಲೊ ಬಳಗದವರಿಂದ ಬ್ಯಾರಿ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ಅಕಾಡಮಿಯ ರಿಜಿಸ್ಟ್ರಾರ್ ಚಂದ್ರಹಾಸ ರೈ ಬಿ. ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News