ಉ.ಕ ಪ್ರತ್ಯೇಕ ರಾಜ್ಯ ವಿಚಾರದಲ್ಲಿ ಉಮೇಶ್ ಕತ್ತಿ, ರಾಮುಲು ಅಭಿಪ್ರಾಯ ವೈಯಕ್ತಿಕ: ಜಗದೀಶ್ ಶೆಟ್ಟರ್
Update: 2018-08-02 14:03 GMT
ಹುಬ್ಬಳ್ಳಿ, ಆ. 2: ‘ಬಿಜೆಪಿಗೆ ಅಖಂಡ ಕರ್ನಾಟಕದ ಕನಸಿದೆ. ಉ.ಕ. ಅಭಿವೃದ್ಧಿಗೆ ನಾವು ಹೋರಾಟ ಮಾಡುತ್ತೇವೆ. ಆದರೆ, ಈ ವಿಚಾರದಲ್ಲಿ ಉಮೇಶ್ ಕತ್ತಿ ಹಾಗೂ ಶ್ರೀರಾಮುಲು ತಮ್ಮ ವೈಯಕ್ತಿಕ ಅಭಿಪ್ರಾಯ ಹೇಳಿದ್ದಾರೆ ಅಷ್ಟೇ’ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ.
ಗುರುವಾರ ನಗರದಲ್ಲಿ ಮಾತನಾಡಿದ ಅವರು, ಸಿಎಂ ಕುಮಾರಸ್ವಾಮಿಯವರ ಪ್ರಚೋದನಾಕಾರಿ ಹೇಳಿಕೆಯಿಂದಲೇ ಪ್ರತ್ಯೇಕ ರಾಜ್ಯದ ಕೂಗು ಆರಂಭವಾಗಿದ್ದು, ಬಂದ್ ನಡೆದಿದೆ. ಪ್ರತ್ಯೇಕ ರಾಜ್ಯದ ವಿಚಾರದ ಹಿಂದೆ ಬಿಜೆಪಿ ಕೈವಾಡವಿದೆ ಎಂಬ ಆರೋಪ ಸತ್ಯಕ್ಕೆ ದೂರ. ನಮಗೆ ಉತ್ತರ ಕರ್ನಾಟಕ ಅಭಿವೃದ್ಧಿ ಮುಖ್ಯ ಎಂದರು