11ನೇ ತರಗತಿಯ ವಿದ್ಯಾರ್ಥಿಯನ್ನು ಚೂರಿಯಿಂದ ಇರಿದ ಕಿರಿಯ ವಿದ್ಯಾರ್ಥಿ

Update: 2018-08-02 14:32 GMT

ಹೊಸದಿಲ್ಲಿ,ಆ.2: ಇಲ್ಲಿಯ ಶಹಾದಾರಾದ ಕೃಷ್ಣ ನಗರ ಪ್ರದೇಶದಲ್ಲಿಯ ಸರಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳ ನಡುವೆ ನಡೆದ ಹೊಡೆದಾಟದಲ್ಲಿ ಕಿರಿಯ ವಿದ್ಯಾರ್ಥಿಯೋರ್ವ 11ನೇ ತರಗತಿಯ ವಿದ್ಯಾರ್ಥಿಯನ್ನು ಚೂರಿಯಿಂದ ಇರಿದು ಗಾಯಗೊಳಿಸಿದ್ದಾನೆ. ಬೆಳಗಿನ ಪ್ರಾರ್ಥನೆಯ ಬಳಿಕ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದರು.

ಕೈಕಾಲುಗಳು ಮತ್ತು ಬೆನ್ನಿಗೆ ಗಾಯಗಳಾಗಿರುವ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು,ಆರೋಪಿಯನ್ನು ಬಂಧಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News