ಬಂಡೀಪುರದಲ್ಲಿ ರಾತ್ರಿ ಸಂಚಾರಕ್ಕೆ ಅವಕಾಶ ನೀಡಲ್ಲ: ಸಚಿವ ಆರ್.ಶಂಕರ್

Update: 2018-08-02 16:38 GMT

ಬೆಂಗಳೂರು, ಆ.2: ಬಂಡೀಪುರ ಅರಣ್ಯ ಪ್ರದೇಶದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಆರ್.ಶಂಕರ್ ಸ್ಪಷ್ಟಣೆ ನೀಡಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳ ಸರಕಾರವು ಬಂಡೀಪುರ ಅರಣ್ಯ ಪ್ರದೇಶದಲ್ಲಿ ಎಲಿವೇಟೆಡ್ ರಸ್ತೆ ನಿರ್ಮಾಣ ಮಾಡುವಂತೆ ಕೇಂದ್ರದ ಮುಂದೆ ಇಟ್ಟಿರುವ ಬೇಡಿಕೆ ಕುರಿತು ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾತನಾಡಿದ್ದಾರೆ ಎಂದರು.

ಬಂಡೀಪುರದಲ್ಲಿ ರಾತ್ರಿ ವೇಳೆ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿದರೆ ವನ್ಯಜೀವಿಗಳಿಗೆ ತೊಂದರೆ ಆಗುತ್ತದೆ. ಆದುದರಿಂದ, ಈ ಸಂಬಂಧ ಕೇರಳ ಹಾಗೂ ಕೇಂದ್ರ ಸರಕಾರದ ಪ್ರಸ್ತಾವನೆಯನ್ನು ತಿರಸ್ಕರಿಸಿ, ಅವರಿಗೆ ರಾಜ್ಯ ಸರಕಾರದ ಪರವಾಗಿ ಪತ್ರ ಬರೆಯಲಾಗಿದೆ ಎಂದು ಶಂಕರ್ ಹೇಳಿದರು.
ಈಗ ಜಾರಿಯಲ್ಲಿರುವಂತೆ ರಾತ್ರಿ 9 ರಿಂದ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರಕ್ಕೆ ಬಂಡೀಪುರ ಹೆದ್ದಾರಿಯಲ್ಲಿ ಅವಕಾಶ ನೀಡುವುದಿಲ್ಲ. ಕೇವಲ ಕರ್ನಾಟಕ ಹಾಗೂ ಕೇರಳ ರಾಜ್ಯದ ತುರ್ತು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News