×
Ad

ಮಂಡ್ಯ: ಬಸ್ ಢಿಕ್ಕಿ; ಬೈಕ್ ಸವಾರ ಮೃತ್ಯು

Update: 2018-08-02 22:28 IST

ಮಂಡ್ಯ, ಆ.2: ಬಸ್ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಮಳವಳ್ಳೀ ಪಟ್ಟಣದ ಶಾಂಭವಿ ಗ್ಯಾಸ್ ಏಜೆನ್ಸಿ ಬಳಿ ಗುರುವಾರ ಬೆಳಗ್ಗೆ ನಡೆದಿದೆ.

ಮಳವಳ್ಳಿ ತಾಲೂಕಿನ ಹೂವಿನಕೊಪ್ಪಲು ಗ್ರಾಮದ ರಾಚಯ್ಯ ಎಂಬುವರ ಪುತ್ರ ಪ್ರವೀಣ್ (21) ಮೃತಪಟ್ಟ ಯುವಕ. ಈತ ಮಳವಳ್ಳಿ ಪಟ್ಟಣದ ಅವರ ಅಜ್ಜಿ ಮನೆಯಲ್ಲಿ ವಾಸವಾಗಿದ್ದ ಎನ್ನಲಾಗಿದೆ. 

ಪ್ರವೀಣ್ ಬೆಳಗ್ಗೆ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮಳವಳ್ಳಿಯಿಂದ ಕನಕಪುರಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಇನ್ಸ್ ಪೆಕ್ಟರ್ ಗಂಗಾಧರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಮಳವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News