ಕಳವು ಪ್ರಕರಣ: ಮಹಿಳೆ ಬಂಧನ

Update: 2018-08-03 16:53 GMT

ಬೆಂಗಳೂರು, ಆ.3: ಕಳವು ಮಾಡುತ್ತಿದ್ದ ಆರೋಪದಡಿ ಮಹಿಳೆಯೊಬ್ಬಾಕೆಯನ್ನು ನಗರದ ಉತ್ತರ ವಿಭಾಗದ ಪೊಲೀಸರು ಬಂಧಿಸಿ, 5 ಲಕ್ಷ ರೂ. ವೌಲ್ಯದ ಚಿನ್ನಾಭರಣ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿ ಮಹಿಳೆಯನ್ನು ನಗರದ ಮೂಡಲಪಾಳ್ಯದ ಕವಿತಾ(26) ಎಂದು ಗುರುತಿಸಲಾಗಿದೆ.

ಮೇ ತಿಂಗಳಿನಲ್ಲಿ ಶ್ರೀರಾಂ ಪುರ ನಿವಾಸಿ ಸತ್ಯನಾರಾಯಣ್ ರಾವ್ ಎಂಬುವರು ತಮ್ಮ ಮನೆಗೆ ಬೀಗ ಹಾಕಿಕೊಂಡು ಹೊರಗಡೆ ಹೋಗಿದ್ದ ವೇಳೆ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ದುಷ್ಕರ್ಮಿಗಳು ಕಳವು ಮಾಡಿದ್ದರು. ಈ ಸಂಬಂಧ ಪೊಲೀಸರು ದೂರು ನೀಡಿದ್ದರು. ಪೊಲೀಸರು ತನಿಖೆ ಕೈಗೊಂಡು, ಆರೋಪಿ ಕವಿತಾ ಅನ್ನು ಬಂಧಿಸಿದ್ದಾರೆ.

ಈಕೆ ಬಳಿಯಿದ್ದ 5 ಲಕ್ಷ ರೂ.ವೌಲ್ಯದ 150 ಗ್ರಾಂ ಚಿನ್ನಾಭರಣ ಮತ್ತು 2 ಕೆಜಿ ವಶಕ್ಕೆ ಪಡೆದು, ಇಲ್ಲಿನ ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News