ಮೈಸೂರು: ಬೆಂಕಿ ಹಚ್ಚಿ ಮಗುವಿನೊಂದಿಗೆ ಆತ್ಮಹತ್ಯೆಗೆ ಶರಣಾದ ತಾಯಿ

Update: 2018-08-04 14:43 GMT
ಸಾಂದರ್ಭಿಕ ಚಿತ್ರ

ಮೈಸೂರು,ಆ.4: ವರದಕ್ಷಿಣೆ ಕಿರುಕುಳದಿಂದ ಮನನೊಂದ ತಾಯಿ, ಮಗುವಿನೊಂದಿಗೆ ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮೈಸೂರಿನ ಮಹದೇವಪುರದಲ್ಲಿ ನಡೆದಿದೆ ಎನ್ನಲಾಗಿದೆ.

ಮೃತರನ್ನು ಗೌರಮ್ಮ (24) ಮಗು ನಿಹಾಲ್ (2) ಎಂದು ಗುರುತಿಸಲಾಗಿದೆ. ಕೆ.ಆರ್.ಪೇಟೆ ಮೂಲದ ಗೌರಮ್ಮ ಮೂರು ವರ್ಷದ ಹಿಂದೆ ಮಾಲೂರಿನಲ್ಲಿ ಶಿಕ್ಷಕನಾಗಿದ್ದ ಲೋಹಿತ್ ನನ್ನು ವಿವಾಹವಾಗಿದ್ದರು. ಮದುವೆ ಸಮಯದಲ್ಲಿ ಸಾಕಷ್ಟು ವರದಕ್ಷಿಣೆ ಕೂಡ ನೀಡಲಾಗಿತ್ತು. ಆದರೆ ಹಣಕ್ಕಾಗಿ ಪತಿ ಮನೆಯವರು ಕಿರುಕುಳ ನೀಡುತ್ತಲೇ ಇದ್ದರು ಎಂದು ಆರೋಪಿಸಲಾಗಿದೆ.

ನಿನ್ನೆ ತಡರಾತ್ರಿ ಮಗು ಜೊತೆ ಕೊಠಡಿಗೆ ಸೇರಿಕೊಂಡ ಗೌರಮ್ಮ, ನಿಹಾಲ್ ಗೆ ಬೆಂಕಿ ಹಚ್ಚಿ ತಾನೂ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News