ವಾರ್ತಾ ಇಲಾಖೆಗೆ ವಿಶುಕುಮಾರ್ ವರ್ಗಾವಣೆ

Update: 2018-08-04 18:00 GMT

ಬೆಂಗಳೂರು, ಆ.4: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ನ್.ಆರ್. ವಿಶುಕುಮಾರ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಿರ್ದೇಶಕ ಸ್ಥಾನಕ್ಕೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕರ ಹುದ್ದೆಯನ್ನೂ ಎನ್.ಆರ್. ವಿಶುಕುಮಾರ್ ಅವರಿಗೆ ಹೆಚ್ಚುವರಿ ಪ್ರಭಾರ ಸಹ ನೀಡಲಾಗಿದೆ. ಪ್ರಸ್ತುತ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಆಯುಕ್ತರಾಗಿದ್ದ ಕಾರ್ಯ ನಿರ್ವಹಿಸುತ್ತಿದ್ದ ಡಾ.ಪಿ.ಎಸ್.ಹರ್ಷ ಅವರನ್ನು ಮಾತೃ (ಭಾರತೀಯ ಪೊಲೀಸ್ ಸೇವೆ)ಇಲಾಖೆಗೆ ಹಿಂದಿರುಗಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News