ಬಂದ್ಯೋಡು : ಸಹಪಾಠಿಯಿಂದ ಇರಿತಕ್ಕೊಳಗಾಗಿ ಬಾಲಕ ಮೃತ್ಯು

Update: 2018-08-05 06:42 GMT

ಮಂಜೇಶ್ವರ, ಆ. 5: ಇಬ್ಬರು ಸಹಪಾಠಿಗಳ ನಡುವೆ ನಡೆದ ಜಗಳವೊಂದು ಕೊಲೆಯಲ್ಲಿ ಅಂತ್ಯಗೊಂಡಿದೆ. ಇಲ್ಲಿನ ಬಂದ್ಯೋಡು ಸಮೀಪದ ಅಡ್ಕ ಎಂಬಲ್ಲಿ ರವಿವಾರ ಘಟನೆ ಸಂಭವಿಸಿದೆ.

ಮೃತ ಬಾಲಕನನ್ನು ಬಂದ್ಯೋಡು ಸಮೀಪದ ಅಡ್ಕ ನಿವಾಸಿ ಯೂಸುಫ್ ಎಂಬವರ ಪುತ್ರ ಮುಹಮ್ಮದ್ ಮಿದ್ಲಾಜ್ (13) ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ 8.15ರ ಸುಮಾರಿಗೆ ಘಟನೆ ಸಂಭವಿಸಿದೆ. ಇಬ್ಬರು ಸಹಪಾಠಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಈ ವೇಳೆ ಮಿದ್ಲಾಜ್ ನನ್ನು ಸಹಪಾಠಿ ಬಾಲಕನೋರ್ವ ಚೂರಿಯಿಂದ ಇರಿದಿದ್ದಾನೆ. ಇರಿತದಿಂದ ಗಂಭೀರ ಗಾಯಗೊಂಡ ಮಿದ್ಲಾಜ್ ನನ್ನು ಬಂದ್ಯೋಡಿನ ಖಾಸಗಿ ಆಸ್ಪತ್ರೆಗೆ ದಾಖಲಿಸುವ ವೇಳೆ ಕೊನೆಯುಸಿರೆಳೆದಿರುವುದಾಗಿ ತಿಳಿದುಬಂದಿದೆ.

ಘಟನೆ ತಿಳಿದು ಸ್ಥಳಕ್ಕಾಗಮಿಸಿದ ಕುಂಬಳೆ ಸಿಐ ಪ್ರೇಂಸದನ್ ನೇತೃತ್ವದ ಪೊಲೀಸರು ಬಾಲಕನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News