ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮದ ಗಲಾಟೆಗೆ ನಾನೇ ಕಾರಣ: ಶಾಮನೂರು ಶಿವಶಂಕರಪ್ಪ
ಮೈಸೂರು,ಆ.05: ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮದ ಗಲಾಟೆಗೆ ಒಂದು ರೀತಿಯಲ್ಲಿ ನಾನೇ ಕಾರಣ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಹೇಳಿದರು.
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ರವಿವಾರ ಅಖಿಲ ಭಾರತ ವೀರಶೈವ ಮಹಾಸಭಾ, ವೀರಶೈವ ಲಿಂಗಾಯತ ಸಂಘ ಸಂಸ್ಥೆಗಳು ಹಾಗೂ ಬಸವ ಬಳಗಗಳ ಒಕ್ಕೂಟದ ವತಿಯಿಂದ ಬಸವ ಜಯಂತಿ ಆಚರಣೆ ಮತ್ತು ಕರ್ನಾಟಕ ರಾಜ್ಯ ವೀರಶೈವ-ಲಿಂಗಾಯತ ಸಚಿವರು, ಸಂಸದರು, ಶಾಸಕರಿಗೆ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
'ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸರಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಅಳವಡಿಸಬೇಕು ಎಂಬ ಆದೇಶ ಹೊರಡಿಸಿದಾಗ ವೀರಶೈವ ಮಹಾಸಭಾ ವತಿಯಿಂದ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅಲ್ಲಿ ವೀರಶೈವ-ಲಿಂಗಾಯತ ವಿಷಯ ಪ್ರಸ್ತಾಪವಾಯಿತು. ಒಂದು ರೀತಿಯಲ್ಲಿ ನಾವೇ ತಪ್ಪು ಮಾಡಿದ್ದು ಎಂದು ತಿಳಿಸಿದರು.
ಅಂದು ಆರಂಭವಾದ ಕೂಗು ಚುನಾವಣೆಯ ಸಂದರ್ಭದಲ್ಲಿ ದೊಡ್ಡದಾಗಿ ಅಲೆ ಸೃಷ್ಟಿಸಿ, ಈಗ ತಣ್ಣಗಾಗಿದೆ ಎಂದು ಹೇಳಿದರು.