ವಿಟ್ಲ: ಅಕ್ರಮ ಜಾನುವಾರು ಸಾಗಾಟ; ಇಬ್ಬರು ಆರೋಪಿಗಳು ಸೆರೆ

Update: 2018-08-05 17:12 GMT

ವಿಟ್ಲ, ಆ. 5: ಅಕ್ರಮವಾಗಿ ಕೇರಳಕ್ಕೆ ದನಗಳನ್ನು ಸಾಗಾಟ ಮಾಡುತ್ತಿದ್ದ ತಂಡವನ್ನು ಪತ್ತೆ ಹಚ್ಚಿದ ವಿಟ್ಲ ಪೊಲೀಸರು ಎರಡು ದನ, ವಾಹನ ಹಾಗೂ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಪುಣಚ ಗ್ರಾಮದಲ್ಲಿ ನಡೆದಿದೆ.

ಕೇರಳದ ಉಪ್ಪಳ ನಿವಾಸಿ ಅಬೂಬಕ್ಕರ್ (52) ಹಾಗೂ ರಾಜ್‌ಕುಮಾರ್ (40) ಬಂಧಿತ ಆರೋಪಿಗಳು.

ಇವರು ಪುಣಚ ಗ್ರಾಮದ ಚಂದಳಿಕೆ-ಮಾಡತ್ತಡ್ಕ ರಸ್ತೆಯ ಕಂಬಳಿಮೂಲೆ ಎಂಬಲ್ಲಿ ಕೇರಳದ ಕಸಾಯಿಖಾನೆಗೆ ಅಕ್ರಮವಾಗಿ ಎರಡು ದನಗಳನ್ನು ಸಾಗಾಟ ಮಾಡುತ್ತಿದ್ದರೆನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದುಕೊಂಡ ವಿಟ್ಲ ಎಸೈ ಎಚ್.ಈ. ನಾಗರಾಜ್ ಹಾಗೂ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದಾರೆ. ಕೇರಳ ನೊಂದಾವಣೆ ಹೊಂದಿರುವ ವಾಹನ, ದನಗಳ ಒಟ್ಟು ಮೌಲ್ಯ 2.50 ಲಕ್ಷ ರೂ. ಎಂದು ಅಂದಾಜಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News