ರವಿವಾರ ಮಧ್ಯಸ್ಥಿಕೆ ಕೇಂದ್ರ ಆರಂಭ ವಿಚಾರ: ಸಿಜೆ ನಿರ್ಧಾರಕ್ಕೆ ವಕೀಲರ ಸಂಘ ಆಕ್ಷೇಪ

Update: 2018-08-06 16:55 GMT

ಬೆಂಗಳೂರು, ಆ.6: ಬೆಂಗಳೂರು ಮಧ್ಯಸ್ಥಿಕೆ ಕೇಂದ್ರವು ಪ್ರತಿ ರವಿವಾರವೂ ಕಾರ್ಯ ನಿರ್ವಹಿಸಲಿದೆ ಎಂಬ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಅವರ ನಿರ್ಧಾರಕ್ಕೆ ಬೆಂಗಳೂರು ವಕೀಲರ ಸಂಘ ಆಕ್ಷೇಪ ವ್ಯಕ್ತಪಡಿಸಿದೆ.

ಇದು ಮುಖ್ಯ ನ್ಯಾಯಮೂರ್ತಿಗಳು ನಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಪ್ರಕಟಿಸಿರುವ ಏಕಪಕ್ಷೀಯ ನಿರ್ಧಾರ. ಹೀಗಾಗಿ ಕೂಡಲೇ ಎಲ್ಲರ ಜೊತೆಗೂ ಚರ್ಚೆ ನಡೆಸಿ ಈ ಬಗ್ಗೆ ತೀರ್ಮಾನ ಕೈಗೊಳ್ಳಬೇಕು ಎಂದು ಅಧ್ಯಕ್ಷ ಎ.ಪಿ.ರಂಗನಾಥ್ ಮನವಿ ಮಾಡಿದ್ದಾರೆ.

ನಗರದ ವಕೀಲರು ಈಗಾಗಲೇ ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ನಗರದ ಸಂಚಾರ ದಟ್ಟಣೆಯ ನಡುವೆ ಬಿಡುವಿಲ್ಲದ ಶ್ರಮ ವಹಿಸಿ ದುಡಿಯುತ್ತಿದ್ದು ಮಾನಸಿಕ ಒತ್ತಡದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ 24X 7 ಕಾರ್ಯ ನಿರ್ವಹಿಸಬೇಕು ಎಂಬ ಇರಾದೆ ಒಳ್ಳೆಯದಲ್ಲ ಎಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News