ಕುಂಬಳೆ: ಗ್ಯಾಸ್ ಟ್ಯಾಂಕರ್ ಪಲ್ಟಿ

Update: 2018-08-07 05:46 GMT

ಕಾಸರಗೋಡು, ಆ.7: ಚಾಲಕನ ನಿಯಂತ್ರಣ ತಪ್ಪಿದ ಅನಿಲ ಟ್ಯಾಂಕರ್ ರಸ್ತೆ ಬದಿಗೆ ಉರುಳಿಬಿದ್ದ ಘಟನೆ ಇಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಹನುಮಾನ್‌ದೇವಸ್ಥಾನ ಬಳಿ ನಡೆದಿದೆ. ರಸ್ತೆ ಹೊಂಡವನ್ನು ತಪ್ಪಿಸುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟ್ಯಾಂಕರ್ ರಸ್ತೆ ಬದಿಗೆ ಉರುಳಿ ಬಿದ್ದಿದೆ.

ಘಟನೆಯ ಹಿನ್ನೆಲೆಯಲ್ಲಿ ಉಪ್ಪಳದಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬಂದಿ ಟ್ಯಾಂಕರನ್ನು ಪರಿಶೀಲಿಸಿ ಅನಿಲ ಸೋರಿಕೆ ಆಗಿಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ.

ಅಗ್ನಿಶಾಮಕ ದಳದ ಸಿಬ್ಬಂದಿ ಮುಂದಿನ ಕ್ರಮ ತೆಗೆದುಕೊಂಡಿದ್ದು, ಮಂಗಳೂರಿನಿಂದ ಅನಿಲ ಕಂಪೆನಿ ಅಧಿಕಾರಿಗಳು ಸ್ಥಳಕ್ಕೆ ತಲುಪಿದ ಬಳಿಕ ಟ್ಯಾಂಕರ್ ತೆರವುಗೊಳಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದೆ.

ಮಂಗಳೂರಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಈ ಟ್ಯಾಂಕರ್ ರಸ್ತೆ ಹೊಂಡ ತಪ್ಪಿಸಲು ಯತ್ನಿಸಿದಾಗ ಈ ದುರ್ಘಟನೆ ಸಂಭವಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News