ಕೊಲೆಗಾರರ ವೈಭವೀಕರಣ ಬೇಡ: ಕವಿತಾ ಲಂಕೇಶ್

Update: 2018-08-07 13:44 GMT

ಬೆಂಗಳೂರು, ಆ.7: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟಿರುವ ಕೊಲೆಗಾರರನ್ನು ವೈಭವೀಕರಿಸುವುದು ಸರಿಯಲ್ಲ. ಕೊಲೆಗಾರರು ಎಂದಿಗೂ ಕೊಲೆಗಾರರೇ ಎಂದು ಗೌರಿ ಲಂಕೇಶ್ ಸಹೋದರಿ ಕವಿತಾ ಲಂಕೇಶ್ ಹೇಳಿದರು.

ಮಂಗಳವಾರ ವಿಧಾನಸೌಧದಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ರನ್ನು ಭೇಟಿ ಮಾಡಿ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೌರಿ ಹತ್ಯೆ ಪ್ರಕರಣದ ತನಿಖೆಯು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿದೆ ಎಂದರು.

ಹಲವರನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ. ಆದರೆ, ಇದರ ಹಿಂದೆ ಇನ್ನೂ ಹಲವು ಪ್ರಮುಖರು ಇರುವ ಶಂಕೆಯಿದೆ. ಈಗಾಗಲೆ ಬಂಧಿಸಲ್ಪಟ್ಟಿರುವ ಆರೋಪಿಗಳ ಪರವಾಗಿ ಕೆಲವರು ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ. ಅವರು ಕೂಡ ಅದೇ ಸಂಘಟನೆಗಳಿಗೆ ಸೇರಿದವರಾಗಿರಬಹುದು ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News