ತೊಕ್ಕೊಟ್ಟು: ರೈಲು ಢಿಕ್ಕಿಯಾಗಿ ಮಂಗಳೂರಿನ ಮಹಿಳೆ ಮೃತ್ಯು
Update: 2018-08-08 08:38 GMT
ಕೊಣಾಜೆ, ಆ.8: ಹಳಿ ದಾಟುತ್ತಿದ್ದ ವೇಳೆ ರೈಲು ಢಿಕ್ಕಿಯಾಗಿ ಮಹಿಳೆಯೊಬ್ಬಳು ಮೃತಪಟ್ಟ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ತೊಕ್ಕೊಟ್ಟಿನಲ್ಲಿ ಇಂದು ಬೆಳಗ್ಗೆ ನಡೆದಿದೆ.
ಮೃತರನ್ನು ಮಂಗಳೂರು ಮೂಲದ ನಿವಾಸಿ ತಬಸ್ಸುಮ್(23) ಎಂದು ಗುರುತಿಸಲಾಗಿದೆ.
ತಬಸ್ಸುಮ್ ಅವರು ಹಳಿ ದಾಟುತ್ತಿದ್ದ ವೇಳೆ ಆಕಸ್ಮಿಕವಾಗಿ ರೈಲು ಢಿಕ್ಕಿಯಾಗಿ ಈ ಅವಘಡ ಸಂಭವಿಸಿರಬೇಕೆಂದು ಶಂಕಿಸಲಾಗಿದೆ.
ಈ ಬಗ್ಗೆ ರೈಲ್ವೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.