ಉಳ್ಳಾಲ ಸೇತುವೆಯಿಂದ ಹಾರಿ ಯುವಕ ಆತ್ಮಹತ್ಯೆ

Update: 2018-08-08 08:47 GMT

ಮಂಗಳೂರು, ಆ.8: ರಾ.ಹೆ.66ರ ಉಳ್ಳಾಲ ಸೇತುವೆಯಿಂದ ಯುವಕನೊಬ್ಬ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ಮಧ್ಯಾಹ್ನ ಸುಮಾರು 1:45ರ ಸುಮಾರಿಗೆ ನಡೆದಿದೆ.

ಸೇತುವೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಟೀ ಶರ್ಟ್ ಧರಿಸಿದ್ದ ಮತ್ತು ಹೆಗಲಿಗೆ ಬ್ಯಾಗ್ ಹಾಕಿಕೊಂಡಿದ್ದ ಯುವಕನೊಬ್ಬ ಇದ್ದಕ್ಕಿದ್ದಂತೆಯೇ ನದಿಗೆ ಹಾರಿದ ಎಂದು ಪ್ರತ್ಯಕ್ಷದರ್ಶಿ ಮಹಿಳೆಯೊಬ್ಬರು ತಿಳಿಸಿದ್ದಾರೆ. ಮೇಲ್ನೋಟಕ್ಕೆ ಕಾಲೇಜು ವಿದ್ಯಾರ್ಥಿಯಂತೆ ಕಾಣುತ್ತಿದ್ದ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಈ ಯುವಕ ಯಾರೆಂಬುದು ಇನ್ನೂ ಪತ್ತೆಯಾಗಿಲ್ಲ. ತೊಕ್ಕೊಟ್ಟಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಸೇತುವೆಯಲ್ಲಿ ಈ ಘಟನೆ ಸಂಭವಿಸಿದೆ. ಕೃತ್ಯದ ಬಗ್ಗೆ ಮಾಹಿತಿ ತಿಳಿಯಲು ಸಾರ್ವಜನಿಕರು, ವಾಹನಿಗರು ಸೇತುವೆಯಲ್ಲೇ ನಿಂತ ಕಾರಣ ಕೆಲಕಾಲ ಸಂಚಾರಕ್ಕೆ ತೊಡಕುಂಟಾಗಿತ್ತು. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News