ಮಂಗಳೂರು ನಗರ ಪಾಲಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ

Update: 2018-08-08 10:56 GMT

ಮಂಗಳೂರು, ಆ.8: ಮಂಗಳೂರು ಮಹಾನಗರದ ದುರಾಡಳಿತದ ವಿರುದ್ಧ ಬಿಜೆಪಿ ಮಂಗಳೂರು ನಗರ ದಕ್ಷಿಣ ಘಟಕವು ಬುಧವಾರ ಪಾಲಿಕೆಯ ಮುಂಭಾಗ ಪ್ರತಿಭಟನೆ ನಡೆಸಿತು.

ಕಾಂಗ್ರೆಸ್ ಆಡಳಿತದ ಪಾಲಿಕೆಯಲ್ಲಿ ಭ್ರಷ್ಟಾಚಾರ ಮಿತಿಮೀರಿದೆ. ಜನತೆಯ ಯಾವ ಕೆಲಸವೂ ಕೂಡ ಪಾಲಿಕೆಯಲ್ಲಿ ಆಗುತ್ತಿಲ್ಲ. ಪ್ರತಿಯೊಂದು ಅರ್ಜಿಗೆ ಸಕಾಲದಲ್ಲಿ ಮುಕ್ತಿ ಸಿಗುತ್ತಿಲ್ಲ. ನಗರದ ಹೃದಯಭಾಗದಲ್ಲಿರುವ ಪುರಭವನದ ಹೆಸರನ್ನು ಬದಲಾಯಿಸಲೂ ಕೂಡ ಪಾಲಿಕೆಯ ಆಡಳಿತ ಮೀನಮೇಷ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಪ್ರತಿಭಟನೆಯಲ್ಲಿ ಕಾರ್ಪೊರೇಟರ್‌ಗಳಾದ ಪ್ರೇಮಾನಂದ ಶೆಟ್ಟಿ, ಸುಧೀರ್ ಶೆಟ್ಟಿ ಕಣ್ಣೂರು, ಪಕ್ಷದ ಮುಖಂಡರಾದ ಭಾಸ್ಕರಚಂದ್ರ ಶೆಟ್ಟಿ, ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ನಿತಿನ್ ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News