ಲಂಚ ಸ್ವೀಕಾರ: ಪಾವಗಡ ತಹಶೀಲ್ದಾರ್ ಎಸಿಬಿ ಬಲೆಗೆ

Update: 2018-08-08 17:16 GMT

ತುಮಕೂರು,ಆ.08: ಜಮೀನಿನ ಖಾತೆ ಬದಲಾವಣೆ ಮಾಡಿಕೊಡಲು ನಿವೃತ್ತ ಅಧಿಕಾರಿಯೊಬ್ಬರಿಂದ 10 ಸಾವಿರ ರೂ ಲಂಚ ಸ್ವೀಕರಿಸುವ ವೇಳೆ ಪಾವಗಡ ತಹಶೀಲ್ದಾರ್ ತಿಪ್ಪುರಾವ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ಬಂಧಿಸಿದ್ದಾರೆ.

ನಿವೃತ್ತ ಅಧಿಕಾರಿ ವೀರಲಗೊಂದಿಯ ನರಸಿಂಹಯ್ಯ ಎಂಬುವವರಿಂದ ಜಮೀನಿನ ಖಾತೆ ಬದಲಾವಣೆ ಮಾಡಿಕೊಡಲು 10 ಸಾವಿರ ರೂ ಲಂಚ ಸ್ವೀಕರಿಸುವ ವೇಳೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ, ಲಂಚದ ಹಣದ ಸಮೇತ ತಹಶೀಲ್ದಾರ್ ತಿಪ್ಪುರಾವ್ ಅವರನ್ನು ಬಂಧಿಸಿದ್ದಾರೆ. ಕಳೆದ ಒಂದು ವಾರದ ಹಿಂದೆ ವರ್ಗಾವಣೆ ಆದೇಶವಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News