ರಾಜೀವ್ ಗಾಂಧಿ ಹಂತಕರ ಬಿಡುಗಡೆ ಪ್ರಸ್ತಾವನೆಯನ್ನು ತಿರಸ್ಕರಿಸಿದ ಕೇಂದ್ರ ಸರಕಾರ

Update: 2018-08-10 06:34 GMT

ಹೊಸದಿಲ್ಲಿ, ಆ.10: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯಾ ಪ್ರಕರಣದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿರುವ 7 ಮಂದಿ ಅಪರಾಧಿಗಳನ್ನು ಬಿಡುಗಡೆ ಮಾಡುವಂತೆ ತಮಿಳುನಾಡು ಸರಕಾರ ಸಲ್ಲಿಸಿದ್ದ ಪ್ರಸ್ತಾವನೆಯನ್ನು  ಕೇಂದ್ರ ಸರಕಾರ ತಿರಸ್ಕರಿಸಿದೆ.

ಈ ವಿಚಾರದಲ್ಲಿ ಕೇಂದ್ರ ಸರಕಾರವು ಸುಪ್ರೀಂ ಕೋರ್ಟ್ ಗೆ ತನ್ನ ನಿಲುವನ್ನು ಸ್ಪಷ್ಟಪಡಿಸಿದೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹಂತಕರನ್ನು ಬಿಡುಗಡೆಗೊಳಿಸುವುದು ಅಪಾಯಕಾರಿ ನಡೆ.  ಹಂತಕರ ಬಿಡುಗಡೆ ವಿಚಾರವನ್ನು ಕಾನೂನಿನ ವಿವಿಧ ಆಯಾಮಗಳಲ್ಲಿ ಯೋಚಿಸಬೇಕಾಗುತ್ತದೆ  ಎಂದು ಕೇಂದ್ರ ಸರಕಾರ ಹೇಳಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News