ರಾಮಚಂದ್ರಾಪುರ ಮಠಕ್ಕೆ ಗೋಕರ್ಣ ದೇವಾಲಯ ಹಸ್ತಾಂತರ : ಆದೇಶ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು, ಆ.10: ಗೋಕರ್ಣ ದೇವಾಲಯನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರ ಪಡಿಸಿದ ಆದೇಶವನ್ನು ರದ್ದುಪಡಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
2008ರ ಆ.12ರಂದು ಅಂದಿನ ಸರಕಾರ ಗೋಕರ್ಣ ದೇವಾಲಯವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರಿಸಿತ್ತು. ಇದೇ ವೇಳೆ ಸರಕಾರದ ನಿರ್ಧಾರವನ್ನು ಪ್ರಶ್ನೆ ಮಾಡಿ ರಾಜ್ಯ ಹೈಕೋರ್ಟ್ನಲ್ಲಿ ಬಾಲಕೃಷ್ಣ ದೀಕ್ಷಿತ್, ಎನ್ನುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು.
ರಾಜ್ಯದ ಸರಕಾರದ ಆದೇಶದಲ್ಲಿ ಲೋಪದೋಷಗಳಿವೆ. ಮಹಾಬಲೇಶ್ವರ ದೇವಸ್ಥಾನವನ್ನು ಧಾರ್ಮಿಕ ದತ್ತಿ ಪಟ್ಟಿಯಿಂದ ಕೈಬಿಟ್ಟಿದ್ದು ಸರಿಯಲ್ಲ. ಹೀಗಾಗಿ, ಬಿಎಸ್ವೈ ಸರಕಾರದ ಆದೇಶವನ್ನು ರದ್ದುಗೊಳಿಸುತ್ತಿದ್ದೇವೆ. ಗೋಕರ್ಣ ದೇವಸ್ಥಾನವು ಧಾರ್ಮಿಕ ದತ್ತಿ ದೇಗುಲವಾಗಿ ಮುಂದುವರಿಯಲಿ ಎಂದು ಹೈಕೋರ್ಟ್ ಪೀಠ ತನ್ನ 256 ಪುಟಗಳ ತೀರ್ಪಿನಲ್ಲಿ ತಿಳಿಸಿದೆ.
ಗೋಕರ್ಣ ದೇವಸ್ಥಾನಕ್ಕೆ ತತ್ಕ್ಷಣವೇ ಡಿಸಿ ನೇತೃತ್ವದಲ್ಲಿ ಉಸ್ತುವಾರಿ ಸಮಿತಿ ರಚನೆಯಾಗಬೇಕು ಎಂದು ಆದೇಶಿಸಿದ ನ್ಯಾಯಾಲಯವು, ಸಮಿತಿಯ ಸಲಹೆಗಾರರಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎನ್. ಶ್ರೀಕೃಷ್ಣ ಅವರನ್ನು ನೇಮಿಸಿದೆ. ಸೆ. 10ರಂದು ಉಸ್ತುವಾರಿ ಸಮಿತಿ ಅಸ್ತಿತ್ವಕ್ಕೆ ಬರಲಿದ್ದು, ಅಲ್ಲಿಯವರೆಗೂ ಗೋಕರ್ಣ ಕ್ಷೇತ್ರವು ರಾಮಚಂದ್ರಾಪು ಮಠದ ಸುಪರ್ದಿಯಲ್ಲೇ ಇರಲಿದೆ.
ಅಷ್ಟರೊಳಗೆ ಗೋಕರ್ಣ ದೇವಸ್ಥಾನದ ಸ್ಥಿರಾಸ್ತಿ, ಚರಾಸ್ತಿ ಪಟ್ಟಿಯನ್ನು ತಯಾರಿಸಿ ಎರಡು ವಾರದಲ್ಲಿ ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ನ್ಯಾ.ಅರವಿಂದ್ ಕುಮಾರ್ ಮತ್ತು ನ್ಯಾ. ಬಿ.ವಿ. ನಾಗರತ್ನ ಅವರಿದ್ದ ವಿಭಾಗೀಯ ಪೀಠ ಸೂಚಿಸಿದೆ.
ಹಾಗೆಯೇ ಗೋಕರ್ಣ ದೇವಾಲಯ ಧಾರ್ಮಿಕ ದತ್ತಿ ದೇಗುಲವಾಗಿ ಮುಂದುವರೆಯಲಿದೆ ಎಂದು ನ್ಯಾಯಪೀಠವು ತಿಳಿಸಿತು. ಗೋಕರ್ಣ ದೇವಸ್ಥಾನಕ್ಕೆ ತತಕ್ಷಣವೇ ಡಿಸಿ ನೇತೃತ್ವದಲ್ಲಿ ಉಸ್ತುವಾರಿ ಸಮಿತಿ ರಚನೆಯಾಗಬೇಕು ಎಂದು ಆದೇಶಿಸಿದ್ದು, ಸಮಿತಿಯ ಸಲಹೆಗಾರರಾಗಿ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎನ್. ಶ್ರೀಕೃಷ್ಣ ಅವರನ್ನು ನೇಮಿಸಿದೆ.
ಶ್ರೀಕ್ಷೇತ್ರ ಮಠದ ಆಡಳಿತಕ್ಕೆ ಬಂದ ಮೇಲೆ ದೇವಸ್ಥಾನದ ಸಂಪೂರ್ಣ ಆರ್ಥಿಕ ವ್ಯವಸ್ಥೆಯನ್ನು ಪಾರದರ್ಶಕ ಮಾಡಲಾಗಿದೆ. ಇಲ್ಲಿ ಬರುವ ಪ್ರತಿ ಪೈಸೆಯೂ ಕೂಡ ಅತ್ಯಂತ ಪಾರದರ್ಶಕವಾಗಿ ನಿರ್ವಹಿಸಲ್ಪಡುತ್ತದೆ ಎಂದು ಮಠ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
2008ರಲ್ಲಿ ಅಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನೇತೃತ್ವದ ಬಿಜೆಪಿ ಸರಕಾರವು, ಗೋಕರ್ಣ ದೇವಸ್ಥಾನವನ್ನು ರಾಮಚಂದ್ರಾಪುರ ಮಠ್ಕಕೆ ಹಸ್ತಾಂತರಿಸಿತ್ತು.
ಪ್ರಕರಣದ ಹಿನ್ನೆಲೆ: ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಗೋಕರ್ಣ ದೇವಾಲಯವನ್ನು ಹಿಂದೂ ಧಾರ್ಮಿಕ ದತ್ತಿ ಮತ್ತು ಧರ್ಮದಾಯಿ ಇಲಾಖೆಯ ವ್ಯಾಪ್ತಿಯಿಂದ ಹೊಸನಗರ ರಾಮಚಂದ್ರಾಪುರ ಮಠದ ಸುಪರ್ದಿಗೆ ವಹಿಸಲಾಗಿತ್ತು.
ಇತಿಹಾಸ ಪ್ರಸಿದ್ದ ಗೋಕರ್ಣ ಮಹಾಬಲೇಶ್ವರ ದೇವಾಲಯವನ್ನು ಸರಕಾರ ಮತ್ತೆ ತನ್ನ ತೆಕ್ಕೆಗೆ ತೆಗೆದುಕೊಳ್ಳುವ ಇಂಗಿತ ವ್ಯಕ್ತ ಪಡಿಸಿರುವ ಹಿನ್ನೆಲೆಯಲ್ಲಿ, ಸರಕಾರದ ವಿರುದ್ದ ಭಾರೀ ವಿರೋಧ ವ್ಯಕ್ತವಾಗಿತ್ತು.ಗೋಕರ್ಣ ದೇವಸ್ಥಾನ ಯಾವತ್ತಿಗೂ ಕೂಡ ರಾಮಚಂದ್ರಾಪುರ ಮಠದ್ದೇ ಆಗಿರುವ ಕಾರಣ ಸರಕಾರಕ್ಕೆ ಈ ದೇವಸ್ಥಾನದ ಮೇಲೆ ಎಂದಿಗೂ ಹಕ್ಕು ಇರಲಿಲ್ಲ. ಪ್ರಚಲಿತ ಕಾನೂನಿನಂತೆ ಗೋಕರ್ಣ ದೇವಸ್ಥಾನವನ್ನು ಅಧಿಸೂಚಿತ ಪಟ್ಟಿಗೆ ಸೇರಿಸಲು ಸಾಧ್ಯವಿರಲಿಲ್ಲ.
ಈ ವಿಚಾರವನ್ನು ಸರಕಾರವೇ ತನ್ನ ಆದೇಶ ಪ್ರತಿಕ್ರಿಯೆಯಲ್ಲಿ ಹಾಗೂ ನ್ಯಾಯಾಲಯದಲ್ಲಿ ನಿರ್ದಿಷ್ಟವಾಗಿ ಹೇಳಿತ್ತು. ಇದೇ ನಿಲುವನ್ನು ಆಧರಿಸಿ ಸರಕಾರ ಸರ್ವೋಚ್ಛ ನ್ಯಾಯಾಲಯದಲ್ಲಿ ಅಫಿಡವಿಟ್ ಸಲ್ಲಿಸಿದೆ ಎಂದು ಮಠ ಸ್ಪಷ್ಟನೆ ನೀಡಿತ್ತು.