ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದೇ ನಮ್ಮ ಗುರಿ: ಸಿದ್ದರಾಮಯ್ಯ
ಮೈಸೂರು,ಆ.11: ಕೋಮುವಾದಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದೇ ನಮ್ಮ ಗುರಿ. ಸ್ಥಳೀಯ ಸಂಸ್ಥೆ ಚುನಾವಾಣೆಯಿಂದಲೇ ಬಿಜೆಪಿಗೆ ಅಧಿಕಾರ ದೊರಕದಂತೆ ಎಚ್ಚರಿಕೆಯಿಂದ ಹೋರಾಟ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕರ್ತರಿಗೆ ಕರೆನೀಡಿದರು.
ನಗರದ ಖಾಸಗಿ ಹೋಟೆಲ್ನಲ್ಲಿ ಶನಿವಾರ ಟಿ.ನರಸೀಪುರ ಪುರಸಭೆ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ತಳಮಟ್ಟದಿಂದ ಬಿಜೆಪಿ ಪಕ್ಷವನ್ನು ದೂರವಿಟ್ಟಷ್ಟು ಕೋಮುವಾದವನ್ನು ದೂರ ಇಡಬಹುದು. ರಾಜ್ಯದಲ್ಲಿ ಬಿಜೆಪಿಗೆ ಅಧಿಕಾರ ತಪ್ಪಿಸುವ ಉದ್ದೇಶದಿಂದ ಜೆಡಿಎಸ್ ಪಕ್ಷವನ್ನು ಬೆಂಬಲಿಸಲಾಗಿದೆ. ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವುದು ನಮ್ಮ ಅಜೆಂಡಾವಾಗಬೇಕು ಎಂದು ಹೇಳಿದರು.
ರಾಜ್ಯದಲ್ಲಿ ನಡೆಯುತ್ತಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಯಾವುದೇ ಹೊಂದಾಣಿಕೆ ಮಾಡಿಕೊಂಡಿಲ್ಲ. ಚುನಾವಣೆಗೆ ಸೂಕ್ತ ಅಭ್ಯರ್ಥಿಗಳನ್ನು ಹಾಕುತ್ತೇವೆ. ಅವರಿಗೆ ಬೆಂಬಲ ನೀಡ. ಆಂತರಿಕ ಸಮಸ್ಯೆಗಳನ್ನಿಟ್ಟುಕೊಳ್ಳಬೇಡಿ ಎಂದು ಹೇಳಿದರು.