ಕೇರಳದಲ್ಲಿ ಮುಂದುವರಿದ ಮಳೆ: 37ಕ್ಕೇರಿದ ಸಾವಿನ ಸಂಖ್ಯೆ

Update: 2018-08-11 15:07 GMT

ಕೊಚ್ಚಿ, ಆ.11: ಕೇರಳದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಮೃತಪಟ್ಟವರ ಸಂಖ್ಯೆ 37ಕ್ಕೇರಿದೆ. ಕೇರಳದ 14 ಜಿಲ್ಲೆಗಳಲ್ಲಿ 11 ಜಿಲ್ಲೆಗಳು ಜಲಾವೃತವಾಗಿದೆ ಎಂದು ವರದಿಯಾಗಿದೆ.

ಪ್ರವಾಹಪೀಡಿತ ಪ್ರದೇಶಗಳಲ್ಲಿ ಸೇನೆ ಹಾಗು ಇತರ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ನಾಳೆ ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ಕೇರಳಕ್ಕೆ ಭೇಟಿ ನೀಡಲಿದ್ದಾರೆ. 73 ಕ್ಯಾಂಪ್ ಗಳಲ್ಲಿ ಸುಮಾರು 11,713 ಮಂದಿ ಆಶ್ರಯ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಈವರೆಗೆ ಐವರು ನಾಪತ್ತೆಯಾಗಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News