ಪರಭಾಷಿಗರ ಹೆಚ್ಚಳದಿಂದ ಕನ್ನಡ ನಾಡು-ನುಡಿಗೆ ಧಕ್ಕೆ: ವಾಟಾಳ್ ನಾಗರಾಜ್

Update: 2018-08-11 15:28 GMT

ಬೆಂಗಳೂರು, ಆ.11: ರಾಜ್ಯದಲ್ಲಿ ಪರಭಾಷಿಗರ ಹಾವಳಿ ಹೆಚ್ಚಾಗುತ್ತಿದ್ದು, ಕನ್ನಡ ನಾಡು-ನುಡಿಗೆ ಧಕ್ಕೆಯಾಗುತ್ತಿದೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ ವ್ಯಕ್ತಪಡಿಸಿದರು.

ಶನಿವಾರ ನಗರದ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಅವರು, ರಾಜ್ಯದಲ್ಲಿ ಇತ್ತೀಚೆಗೆ ಪರಭಾಷಿಕರ ಹಾವಳಿ ಹೆಚ್ಚಾಗಿದ್ದು, ಸಣ್ಣ ಸಣ್ಣ ವ್ಯಾಪಾರದಲ್ಲೂ ಸ್ಥಳೀಯರಿಗೆ ನಷ್ಟವಾಗುತ್ತಿದೆ. ರಾಜ್ಯದ ಸಂಪನ್ಮೂಲ ಹೊರ ರಾಜ್ಯಗಳಿಗೆ ಹೋಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಅವರು, ಕೂಡಲೆ ಸರಕಾರ ಪರಭಾಷಿಗರ ನಿಯಂತ್ರಣಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News