×
Ad

ಉಡುಪಿ: ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರ ಸಭೆ

Update: 2018-08-11 21:18 IST

ಉಡುಪಿ, ಆ.11: ಸ್ಥಳೀಯ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಭೆ ಹಾಗೂ ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ವಾರ್ಷಿಕ ಕ್ರೀಡಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ವಿಶೇಷ ಸಭೆ ಇತ್ತೀಚೆಗೆ ಇಲ್ಲಿ ನಡೆಯಿತು.

ಉಡುಪಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸುಬ್ರಹ್ಮಣ್ಯ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನು ವಿದ್ಯೋದಯ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಎನ್. ನಾಗರಾಜ್ ಬಲ್ಲಾಳ್ ಉದ್ಘಾಟಿಸಿದರು. ಮುಖ್ಯಅತಿಥಿಗಳಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ದೈಹಿಕಶಿಕ್ಷಣ ಅಧಿಕಾರಿ ಮಧುಕರ್ ಎಸ್. ಭಾಗವಹಿಸಿ ಶುಭ ಹಾರೈಸಿದರು.

ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಿಲಾಸ್ ಕುಮಾರ್, ಕ್ರೀಡಾ ಸಂಯೋಜಕ ದಿನೇಶ್‌ಕುಮಾರ್, ಪ್ರಾಥಮಿಕ ಮತ್ತು ಪ್ರೌಢಶಾಲಾ ದೈಹಿಕ ಶಿಕ್ಷಣಸಂಘದ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಉಪಸ್ಥಿತರಿದ್ದರು.

ವಿದ್ಯೋದಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ್ ಎ.ಎಲ್.ಛಾತ್ರ ಸ್ವಾಗತಿಸಿದರು. ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಕಾರ್ಯದರ್ಶಿ ಹಾಗೂ ಕುಂದಾಪುರ ಭಂಡಾರ್‌ಕರ್ಸ್‌ ಪ.ಪೂ. ಕಾಲೇಜಿನ ಪ್ರಾಂಶುಪಾಲ ಜಿ.ಎಂ. ಗೊಂಡ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಡುಪಿ ಜಿಲ್ಲಾ ಪದವಿ ಪೂರ್ವ ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಉಮೇಶ್ ಶೆಟ್ಟಿ ವಂದಿಸಿದರು. ಉಪನ್ಯಾಸಕಿ ಅನುಪಮಾ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News