ವಿಶೇಷ ಅಂಚೆ ಲಕೋಟೆ ಬಿಡುಗಡೆಗೊಳಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ

Update: 2018-08-12 12:20 GMT

ಮೈಸೂರು,ಆ.12: ವಿಶ್ವ ಆನೆ ದಿನಾಚರಣೆ ಅಂಗವಾಗಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ವಿಶೇಷ ಅಂಚೆ ಲಕೋಟೆ ಬಿಡುಗಡೆಗೊಳಿಸಿದರು.

ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ರವಿವಾರ ಆನೆ ಲದ್ದಿಯಿಂದ ತಯಾರಿಸಿರುವ ಆನೆ ಚಿತ್ರವಿರುವ ವಿಶೇಷ ಲಕೋಟೆಯನ್ನು ಬಿಡುಗಡೆಗೊಳಿಸಿ ಸಂತಸ ವ್ಯಕ್ತಪಡಿಸಿದರು.

ನಂತರ ಹಿರಿಯ ಅಂಚೆ ಅಧಿಕಾರಿ ಸಂದೇಶ್ ಮಹದೇವಯ್ಯ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಕಳೆದ ವರ್ಷ ಬಂಡೀಪುರ ಹುಲಿಯ ಚಿಹ್ನೆ ಬಳಸಿ ಲಕೋಟೆಯನ್ನು ಬಿಡುಗಡೆಗೊಳಿಸಲಾಗಿತ್ತು. ಈ ವರ್ಷ ಆನೆ ಲದ್ದಿಯಿಂದಲೇ ತಯಾರಿಸಿದ ಲಕೋಟೆಯನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬಿಡುಗಡೆಗೊಳಿಸಿದ್ದಾರೆ. ಮಾನವ ಹಾಗೂ ಕಾಡು ಪ್ರಾಣಿಗಳ ಸಂಘರ್ಷ ತಪ್ಪಲಿ ಮತ್ತು ಪ್ರಾಣಿಗಳ ಸಂತತಿ ಹೆಚ್ಚಾಗಿ ಕಾಡು ಉಳಿಯಲಿ ಎಂಬ ಉದ್ದೇಶದಿಂದ ಪ್ರಾಣಿಗಳ ಕುರಿತಾದ ಅಂಚೆ ಲಕೋಟೆಯನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಸಚಿವ ಸಾ.ರಾ.ಮಹೇಶ್, ಚಾಮರಾಜನಗರ ಲೋಕಸಭಾ ಸದಸ್ಯ ಆರ್.ಧ್ರುವನಾರಾಯಣ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News