ನಾನು ಮೊದಲು ಕಾಂಗ್ರೆಸ್ ನಲ್ಲಿದ್ದವನು: ಹೆಚ್ ಡಿ ದೇವೇಗೌಡ

Update: 2018-08-12 08:09 GMT

ಬೆಂಗಳೂರು, ಆ.12: ನಾನು ಮೊದಲು  ಕಾಂಗ್ರೆಸ್ ನಲ್ಲಿದ್ದವನು. ಕಾಂಗ್ರೆಸ್ ಇಬ್ಭಾಗವಾದಾಗ ಬಂಡಾಯ ಕಾಂಗ್ರೆಸ್ ಗೆ ಹೋದೆ ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ.

ರವೀಂದ್ರ ಕಲಾ ಕ್ಷೇತ್ರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಜವಾಹರ್ ಲಾಲ್ ನೆಹರೂ ಪ್ರಜಾಪ್ರಭುತ್ವಕ್ಕೆ ಅಡಿಪಾಯ ಹಾಕಿಕೊಟ್ಟಿದ್ದರು. ಆದ್ರೆ ಸಂಸತ್ ನಲ್ಲಿ ಅವರ ಬಗ್ಗೆ ಏನೆನೋ ಮಾತನಾಡುತ್ತಿದ್ದಾರೆ. ಇಂತಹ ಸ್ಥಿತಿಗೆ ನಾವು ಬಂದಿದ್ದೇವೆ ಎಂದು ವಿಷಾದಿಸಿದರು.

ಸ್ವಾತಂತ್ರ್ಯ ತಂದು ಕೊಟ್ಟ  ಕಾಂಗ್ರೆಸ್ ಪಕ್ಷ ಅಸ್ತಿತ್ವ ಕಳೆದುಕೊಳ್ಳಲಾರಂಭಿಸಿದಂತೆ ಪ್ರಾದೇಶಿಕ ಪಕ್ಷಗಳು ತಲೆ ಎತ್ತಿದವು. ಕಾಂಗ್ರೆಸ್ ಗೆ ಯಾಕೆ ಇಂತಹ ಸ್ಥಿತಿ ಬಂದಿದೆ.   ದಕ್ಷಿಣ ಭಾರತದಲ್ಲಿ ಕಾಂಗ್ರೆಸ್ ಗೆ ಸಮರ್ಥ ನಾಯಕರೇ ಇಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

 ನನ್ನ ಮೇಲೆ ಒಂದು ಕಪ್ಪು ಚುಕ್ಕೆಯೂ ಇಲ್ಲ. ಈ ವರೆಗೆ ಯಾರಿಂದಲೂ ಮಾಡಲು  ಸಾಧ್ಯವಾಗಲಿಲ್ಲ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News