ಸೋಮನಾಥ್ ಚಟರ್ಜಿ ನಿಧನ: ಸಿಎಂ ಕುಮಾರಸ್ವಾಮಿ ಸಂತಾಪ

Update: 2018-08-13 05:55 GMT

ಬೆಂಗಳೂರು, ಆ. 13: ಲೋಕಸಭೆಯ ಮಾಜಿ ಸ್ಪೀಕರ್ ಸೋಮನಾಥ್ ಚಟರ್ಜಿ ಅವರ ನಿಧನಕ್ಕೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

1971 ರಿಂದ 2009ರ ವರೆಗೆ 10 ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದ ಸೋಮನಾಥ್ ಚಟರ್ಜಿ ಅವರು ಅದ್ವಿತೀಯ ಸಂಸದೀಯ ಪಟು ಆಗಿದ್ದರು. ಅವರು ಪಕ್ಷಾತೀತವಾಗಿ ಎಲ್ಲರ ಗೌರವಕ್ಕೆ ಪಾತ್ರರಾಗಿದ್ದರು ಎಂದು ಮುಖ್ಯಮಂತ್ರಿ ಸ್ಮರಿಸಿಕೊಂಡಿದ್ದಾರೆ.

ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News