ಆ.13: ಗೋಣಿಕೊಪ್ಪದಲ್ಲಿ ತುಳುವೆರ ಜನಪದ ಕೂಟದ ಸಭೆ

Update: 2018-08-13 11:55 GMT

ಮಡಿಕೇರಿ ಆ.13: ಕೊಡಗು ಜಿಲ್ಲಾ ತುಳುವೆರ ಜನಪದ ಕೂಟದ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ಕೂಟದ ಸಭೆ ಮತ್ತು ಸ್ವಾತಂತ್ರೋತ್ಸವ ಕಾರ್ಯಕ್ರಮ ಆ.15 ರಂದು ನಡೆಯಲಿದೆ. 

ಗೋಣಿಕೊಪ್ಪದ ಟಾಸ್ ಬಿಲ್ಡಿಂಗ್‍ನಲ್ಲಿರುವ ಸಂಘದ ಜಿಲ್ಲಾ ಕಚೇರಿಯಲ್ಲಿ ಬೆಳಗ್ಗೆ 9.30ಕ್ಕೆ ಧ್ವಜಾರೋಹಣ ಮಾಡಲಾಗುವುದೆಂದು ಕೂಟದ ಪ್ರಧಾನ ಕಾರ್ಯದರ್ಶಿ ಪಿ.ಎಂ.ರವಿ ತಿಳಿಸಿದ್ದಾರೆ. ಕಾರ್ಯಕ್ರಮದ ನಂತರ ಜಿಲ್ಲಾ ಸಮಿತಿಯ ಸಭೆ ಬೆಳಗ್ಗೆ 10.30ಗಂಟೆಗೆ ಕೂಟದ ಜಿಲ್ಲಾಧ್ಯಕ್ಷ ಶೇಖರ್ ಭಂಡಾರಿಯವರ ಅಧ್ಯಕ್ಷತೆಯಲ್ಲಿ ನಡೆಯದೆ. ಜಿಲ್ಲಾ ಸಮಿತಿ, ತಾಲೂಕು ಸಮಿತಿ, ಹೋಬಳಿ ಸಮಿತಿ ಪದಾಧಿಕಾರಿಗಳು ಕಾರ್ಯಕ್ರಮ ಮತ್ತು ಸಭೆಗೆ ತಪ್ಪದೆ ಹಾಜರಾಗುವಂತೆ ಅವರು ಮನವಿ ಮಾಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News